ಬ್ರೇಕಿಂಗ್ ನ್ಯೂಸ್
06-12-24 10:42 pm Mangalore Correspondent ಕ್ರೈಂ
ಉಳ್ಳಾಲ, ಡಿ.6: ಉಳ್ಳಾಲ ಪೊಲೀಸ್ ಠಾಣೆಯೊಳಗಡೆ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಮೇಲೆ ಹಲ್ಲೆಗೈದಿದ್ದ ಆರೋಪಿ ಹೊಸಂಗಡಿ ,ಕಡಂಬಾರು ನಿವಾಸಿ ಮಹಮ್ಮದ್ ಆಸಿಫ್ ಜಾಮೀನಿನಲ್ಲಿ ಜೈಲಿನಿಂದ ಹೊರ ಬರುತ್ತಲೇ ಆತನ ಮೇಲೆ ಪ್ರತೀಕಾರ ತೀರಿಸಲು ತಲವಾರು ದಾಳಿಗೆ ಯತ್ನಿಸಿದ್ದರೆನ್ನಲಾದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯೆನ್ನಲಾದ ಅರ್ಜುನ್ ಮಾಡೂರನ್ನು ಉಳ್ಳಾಲ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16 ರ ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಶರತ್ ಅವರ ಸ್ನೇಹಿತ ಅರ್ಜುನ್ ಮಾಡೂರು ಅವರು ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಇನ್ಸ್ ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್ ,ಖಲೀಲ್ ಜತೆ ರಾಜಿ ಮಾತುಕತೆ ನಡೆಸುತ್ತಿದ್ದ ವೇಳೆ ಖಲೀಲ್ ಸಹೋದರ ಆಸಿಫ್ ಎಂಬಾತ ಅರ್ಜುನ್ ಮಾಡೂರಿಗೆ ಏಕಾಏಕಿ ಹಲ್ಲೆ ನಡೆಸಿದ್ದ.
ಅರ್ಜುನ್ ಮಾಡೂರು ಮೇಲಿನ ಹಲ್ಲೆ ಖಂಡಿಸಿ ಮಧ್ಯರಾತ್ರಿಯೇ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಪೊಲೀಸರು ಆರೋಪಿ ಆಸಿಫ್ ನನ್ನ ವಶಕ್ಕೆ ಪಡೆದು ಕೇಸು ಹಾಕಿ ಜೈಲಿಗೆ ತಳ್ಳಿದ್ದರು. ಕಳೆದ ನ.8ರಂದು ಆರೋಪಿ ಮಹಮ್ಮದ್ ಆಸಿಫ್ ಗೆ ಜಾಮೀನು ದೊರೆತಿತ್ತು. ಆಸಿಫ್ ತನ್ನ ಕುಟುಂಬಸ್ಥರ ಜೊತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ತಲಪಾಡಿ ಬಳಿಯ ಕೆ.ಸಿ ರೋಡ್ ನಿಂದ ಆಗಂತುಕರು ಮಾರಕಾಯುಧಗಳಿಂದ ಬೆನ್ನಟ್ಟಿದ್ದಾರೆಂದು ಆರೋಪಿಸಿ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಉಳ್ಳಾಲ ಪೊಲೀಸರು ಇಡ್ಯ ಈಶ್ವರ ನಗರದ ಅಣ್ಣಪ್ಪ ಸ್ವಾಮಿ ಯಾನೆ ಮನು (24), ಪಡೀಲ್ ನಾರ್ಲದ ಸಚಿನ್ (24), ಪಜೀರು ಪಾದಲ್ ಕೋಡಿಯ ಕುಶಿತ್(18) ಮತ್ತು ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾದ ಅಪ್ರಾಪ್ತನನ್ನ ಬಂಧಿಸಿದ್ದರು. ಆರೋಪಿಗಳಲ್ಲಿ ಕುಶಿತ್ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಇದೀಗ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಎನ್ನಲಾದ ಅರ್ಜುನ್ ಮಾಡೂರನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Bajrang dal activist Arjun Madoor arrested over attempt to murder by ullal police in Mangalore. A youth from Kerala assaulted a leader of a Hindu organization inside a police inspector’s room during an inquiry into a car collision, leading to his arrest. Hindu organization workers gathered outside the police station at midnight in protest.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm