ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್ಸ್ಪೆಕ್ಟರ್ ಗುರುದತ್ ಕಾಮತ್, ಸಬ್ಇನ್ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm