ಬ್ರೇಕಿಂಗ್ ನ್ಯೂಸ್
10-12-24 06:46 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕಂಕನಾಡಿ ಮಾರುಕಟ್ಟೆ ಬಳಿಯಲ್ಲಿ ನಿಲ್ಲಿಸಿದ್ದ ಕ್ರೆಟಾ ಕಾರಿನಿಂದ ಗ್ಲಾಸ್ ಒಡೆದು ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗನ್ನು ಕಳವು ಮಾಡಿದ್ದ ಪ್ರಕರಣವನ್ನು ಕದ್ರಿ ಪೊಲೀಸರು 24 ಗಂಟೆಯಲ್ಲಿ ಭೇದಿಸಿದ್ದಾರೆ.
ಡಿ.8ರ ಭಾನುವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿತ್ತು. ನಗರದ ಕಂಕನಾಡಿ ಮಾರುಕಟ್ಟೆ ಹತ್ತಿರ ಪಾರ್ಕ್ ಮಾಡಿ ಹೋಗಿದ್ದ ಕ್ರೆಟಾ ಕಾರಿನಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಳ್ಳರು ಗ್ಲಾಸ್ ಒಡೆದು ಕಳವು ಮಾಡಿದ್ದರು. ಬ್ಯಾಗ್ ನಲ್ಲಿ 6.80 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್ ಟಾಪ್ ಇತ್ತು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಎಸ್ಐ ಉಮೇಶ್ ನೇತೃತ್ವದ ಪೊಲೀಸರು ಪರಿಸರದ ಸಿಸಿಟಿವಿಗಳನ್ನು ಆಧರಿಸಿ ತನಿಖೆ ನಡೆಸಿದ್ದರು. ಆರೋಪಿಯನ್ನು ಗುರುತಿಸಿ, ಆತನ ಹಿಂದೆ ಬಿದ್ದಿದ್ದರು. ನಿನ್ನೆ ರಾತ್ರಿ (ಡಿ.9) 10.30ರ ವೇಳೆಗೆ ಕಂಕನಾಡಿ ಪರಿಸರದ ಮೆಡಿಕಲ್ ಒಂದಕ್ಕೆ ಇನ್ನೊಬ್ಬ ಯುವಕನ ಜೊತೆಗೆ ಬಂದಿದ್ದ. ಅದೇ ಸಂದರ್ಭದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಅಡ್ಯಾರ್ ಪದವು ನಿವಾಸಿ ಅಬ್ದುಲ್ ಅಕ್ರಮ್ (33) ಎಂದು ಗುರುತಿಸಲಾಗಿದೆ.
ಅಕ್ರಮ್ ಮೊದಲ ಬಾರಿಗೆ ಕಳವು ಕೃತ್ಯ ನಡೆಸಿದ್ದು, ಆರೋಪಿಯನ್ನು ಪೊಲೀಸರು ಹಿಂದೆ ಬಿದ್ದು 24 ಗಂಟೆಯೊಳಗೆ ಬಂಧಿಸಿದ್ದೇ ರೋಚಕ. ಕೃತ್ಯಕ್ಕೆ ಬಳಸಿದ್ದ ಆಕ್ಸೆಸ್ ಸ್ಕೂಟರ್ ಹಾಗೂ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ 7.30 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರ ಮಹಿಳೆ ಕೋಣಾಜೆಯವರಾಗಿದ್ದು, ತಾಯಿ ಮನೆಯಿಂದ ರಾತ್ರಿ ಗಂಡನ ಮನೆಗೆ ತೆರಳುತ್ತಿದ್ದರು. ರಾತ್ರಿ ಲೇಟ್ ಆಗಿದ್ದರಿಂದ ಊಟ ಮಾಡ್ಕೊಂಡು ಹೋಗೋಣ ಎಂದು ಕಾರನ್ನು ಕಂಕನಾಡಿಯಲ್ಲಿ ನಿಲ್ಲಿಸಿ ಹೊಟೇಲ್ ಹೋಗಿದ್ದರು. ಅಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ಚಿನ್ನಾಭರಣ ಎಗರಿಸಲಾಗಿತ್ತು.
Mangalore Kadri police nab accused within 24 hrs of theft at Kankandy, recover gold worth Rs 7.3 lakhs. Acting swiftly, the police team traced and arrested Abdul Akram, aged 33, a resident of Adyar village, Mangaluru taluk.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am