ಬ್ರೇಕಿಂಗ್ ನ್ಯೂಸ್
18-12-24 09:23 pm Bangalore Correspondent ಕ್ರೈಂ
ಬೆಂಗಳೂರು, ಡಿ.18: ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ರಾಕೆಟನ್ನು ಪತ್ತೆ ಮಾಡಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿದೇಶಿ ಮಹಿಳೆ ಸಹಿತ ಬರೋಬ್ಬರಿ 24 ಕೋಟಿ ಮೌಲ್ಯದ 12 ಕೇಜಿ ಎಂಡಿಎಂಎ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ರಾಜ್ಯದಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಅತಿದೊಡ್ಡ ಡ್ರಗ್ ರಾಕೆಟ್ ಇದಾಗಿದೆ.
ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಸಿ ಪಾಳ್ಯದಲ್ಲಿ ಮಹಿಳೆ ವಾಸವಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಡಿ.13ರಂದು ದಾಳಿ ಕಾರ್ಯಾಚರಣೆ ನಡೆಸಿದ್ದರು. ಮಹತ್ವದ ಕಾರ್ಯಾಚರಣೆಯಲ್ಲಿ 12 ಕೇಜಿಯಷ್ಟು ತೂಕದ ಬಿಳಿ ಮತ್ತು ಹಳದಿ ಬಣ್ಣದ ಎಂಡಿಎಂಎ ಕ್ರಿಸ್ಟಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶಿ ಮಹಿಳೆ ಟಿಸಿ ಪಾಳ್ಯದಲ್ಲಿ ಆಫ್ರಿಕಾ ಮೂಲದವರಿಗೆಂದೇ ಆಹಾರ ಸಾಮಗ್ರಿಗಳನ್ನು ವಿತರಿಸುವ ಅಂಗಡಿಯೊಂದನ್ನು ನಡೆಸುತ್ತಿದ್ದಾಳೆ ಎಂಬ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಅಂಗಡಿಯಲ್ಲಿದ್ದುಕೊಂಡೇ ಆಫ್ರಿಕನ್ನರಿಗೆ ಮತ್ತು ಇತರ ಗ್ರಾಹಕರಿಗೆ ಡ್ರಗ್ಸ್ ಅನ್ನೂ ಪೂರೈಕೆ ಮಾಡುತ್ತಿದ್ದಳು. ಈಕೆಗೆ ಸಪ್ಲೈ ಮಾಡುತ್ತಿದ್ದವರನ್ನು ಸರ್ಚ್ ಮಾಡುತ್ತಿದ್ದೇವೆ ಎಂದು ಬೆಂಗಳೂರು ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಮುಂಬೈನಿಂದ ಸೋಪ್ ಪ್ಯಾಕೆಟ್, ಒಣ ಮೀನಿನ ಪ್ಯಾಕೆಟ್ ಮೂಲಕ ಡ್ರಗ್ಸ್ ಅನ್ನು ಬೆಂಗಳೂರಿಗೆ ಪೂರೈಸುತ್ತಿದ್ದರು. ಅಲ್ಲದೆ, ಈ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ಸ್ ಮತ್ತು ಇತರರಿಗೆ ಹೆಚ್ಚಿನ ಬೆಲೆಗೆ ಮಾರುತ್ತಿದ್ದರು.
12 ಕೇಜಿ ಎಂಡಿಎಂಎ ಜೊತೆಗೆ ಮೊಬೈಲ್ ಫೋನ್, 70 ಏರ್ಟೆಲ್ ಸಿಮ್ ಅನ್ನು ವಶಕ್ಕೆ ಪಡೆಯಲಾಗಿದೆ. ಈಕೆಗೆ ಮುಂಬೈನಲ್ಲಿ ನೆಲೆಸಿರುವ ಒಬ್ಬಾಕೆ ಮಹಿಳೆಯೇ ಡ್ರಗ್ಸ್ ಪೂರೈಸುತ್ತಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಕ್ರಮವಾಗಿ ಹಣ ಮಾಡುವುದಕ್ಕಾಗಿಯೇ ಈ ಡ್ರಗ್ಸ್ ರಾಕೆಟಲ್ಲಿ ತೊಡಗಿಸಿಕೊಂಡಿದ್ದಾಗಿ ಬಂಧಿತ ಮಹಿಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಅಲ್ಲದೆ, ಈಕೆ ಬಿಸಿನೆಸ್ ವೀಸಾದಲ್ಲಿ ಐದು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದು, ಅದರ ಅವಧಿ ಮುಗಿದರೂ ಅಕ್ರಮವಾಗಿ ಉಳಿದುಕೊಂಡಿದ್ದಳು.
Bengaluru, A foreign national was arrested for allegedly running a drug racket and 12 kg banned MDMA crystals worth an estimated ₹24 crore were seized from her possession here, police said on Tuesday.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm