ಬ್ರೇಕಿಂಗ್ ನ್ಯೂಸ್
21-12-24 06:24 pm Mangalore Correspondent ಕ್ರೈಂ
ಮಂಗಳೂರು, ಡಿ.21: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ದುಪ್ಪಟ್ಟು ಲಾಭ ಸಿಗುತ್ತೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ನಕಲಿ ಏಪ್ ನಲ್ಲಿ ಹೂಡಿಕೆ ಮಾಡಿಸಿ 10 ಲಕ್ಷಕ್ಕೂ ಹೆಚ್ಚು ಹಣವನ್ನು ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಮಂಗಳೂರು ಸೈಬರ್ ಪೊಲೀಸರು ಆಂಧ್ರಪ್ರದೇಶ ಮೂಲದ ಆರೋಪಿಯನ್ನು ದೆಹಲಿ ಏರ್ಪೋರ್ಟ್ ನಲ್ಲಿ ಬಂಧಿಸಿದ್ದಾರೆ.
ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 09/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತರು ವಾಟ್ಸ್ ಆಫ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿದ್ದರು. ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಸ್ಟೋಕ್ ಫ್ರಂಟ್ ಲೈನ್ ಎಂಬ ಲಿಂಕ್ ಅನ್ನು ಕಳುಹಿಸಿ ಫಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 10,84,017 ರೂ. ಹಣವನ್ನು ಪಡೆದು ವಂಚನೆ ಮಾಡಿದ್ದಾಗಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಸೈಬರ್ ಪೊಲೀಸರು ವಾಟ್ಸಪ್ ನಂಬರ್ ಆಧರಿಸಿ ತನಿಖೆ ನಡೆಸಿದ್ದು ಈ ವೇಳೆ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜು ಎಂಬಾತನ ಪತ್ತೆ ಮಾಡಲಾಗಿತ್ತು. ಕಳೆದ ಜೂನ್ ತಿಂಗಳಲ್ಲಿ ರಾಜುವನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಆತ ಭಾರತದಲ್ಲಿ ವಿವಿಧ ಮೊಬೈಲ್ ಕಂಪನಿಗಳ ಡೀಲರ್ ಗಳಿಂದ 500ಕ್ಕೂ ಹೆಚ್ಚು ಸಿಮ್ ಗಳನ್ನು ಪಡೆದು ವಿದೇಶಕ್ಕೆ ಪೂರೈಸುತ್ತಿದ್ದ ಎಂಬುದು ಬೆಳಕಿಗೆ ಬಂದಿತ್ತು. ರಾಜು ಬಳಿಯಿಂದ ಸಿಮ್ ಗಳನ್ನು ಪಡೆಯುತ್ತಿದ್ದ ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ನಿವಾಸಿ ಕಣಾತಲ ವಾಸುದೇವ ರೆಡ್ಡಿ(25) ದುಬೈನಲ್ಲಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ವಿಚಾರ ತಿಳಿದುಬಂದಿತ್ತು.
ಅದರಂತೆ, ವಾಸುದೇವ ರೆಡ್ಡಿ ಪತ್ತೆಗಾಗಿ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ಡಿ.18ರಂದು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ತೆರಳುತ್ತಿದ್ದಾಗ ಇಮ್ರಿಗೇಶನ್ ಅಧಿಕಾರಿಗಳು ವಾಸುದೇವ ರೆಡ್ಡಿಯನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಸೈಬರ್ ಪೊಲೀಸರು ದೆಹಲಿಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ದಸ್ತಗಿರಿ ಮಾಡಿದ್ದಾರೆ.
ನಕಲಿ ಷೇರು ಮಾರುಕಟ್ಟೆಯ ಏಪ್ ಬಳಸಿ ವಂಚಿಸುತ್ತಿದ್ದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಸದ್ಯಕ್ಕೆ ನಕಲಿ ಸಿಮ್ ಆಧರಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ್, ಸೆನ್ ಪೊಲೀಸ್ ಠಾಣೆ ನಿರೀಕ್ಷಕ ಸತೀಶ್ ಎಂ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Mangalore police arrest Odisha based accused at Delhi airport in share market fraud case.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am