ಬ್ರೇಕಿಂಗ್ ನ್ಯೂಸ್
07-01-25 03:50 pm Mangalore Correspondent ಕ್ರೈಂ
ಮಂಗಳೂರು, ಜ 07: ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೊಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಗಗನ್ (24) ಶಿಕ್ಷೆಗೊಳಗಾದವ.
ಪ್ರಕರಣ ನಡೆದು ಕೇವಲ 9 ತಿಂಗಳಿನಲ್ಲೇ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಎಫ್ಟಿಎಸ್ಸಿ-1 ನ್ಯಾಯಾಧೀಶ ವಿನಯ್ ದೇವರಾಜ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಐಪಿಸಿ ಸೆಕ್ಷನ್ 354 (ಸಿ) ಅಡಿಯಲ್ಲಿ ಆರೋಪಿಗೆ 1 ವರ್ಷ ಸಾದಾ ಸಜೆ, 20 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಲು ಸೂಚಿಸಿದೆ. ದಂಡದ ಮೊತ್ತದಲ್ಲಿ 10 ಸಾವಿರ ರೂ. ಮತ್ತು ಪ್ರತ್ಯೇಕವಾಗಿ 1 ಲಕ್ಷ ರೂ. ಹಣವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.
ಪ್ರಕರಣದ ಹಿನ್ನೆಲೆ:
ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ.10ರಂದು ರಾತ್ರಿ 8:45ರ ಸುಮಾರಿಗೆ ಅಪ್ರಾಪ್ತ ಬಾಲಕಿ ತನ್ನ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಆರೋಪಿ ಗಗನ್ (24) ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ಮೊಬೈಲ್ ಲೈಟ್ ಕಂಡು ಬಾಲಕಿ ಕೂಗಿದಾಗ ಅವರ ತಾಯಿ ಬಂದಿದ್ದರು. ಈ ವೇಳೆ ಆರೋಪಿ ಓಡಿಹೋಗಿ ತಪ್ಪಿಸಿಕೊಂಡಿದ್ದನು ಎಂದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಐಗಳಾದ ಗುರಪ್ಪ ಕಾಂತಿ ಮತ್ತು ರೇವಣ್ಣ ಸಿದ್ದಪ್ಪ ಜಿ ತನಿಖೆ ನಡೆಸಿದ್ದರು. ಬಳಿಕ ಪ್ರಕರಣ ಸಂಬಂಧ ಎಸ್ಐ ಸತೀಶ್ ಕೆ.ಎಸ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
Mangalore 24 year old youth gets life imprisonment by the Mangalore court for recording nude video of minor girl while having bath. The accused has been identified as Gagan.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm