ಬ್ರೇಕಿಂಗ್ ನ್ಯೂಸ್
08-01-25 10:57 pm Mangalore Correspondent ಕ್ರೈಂ
ಮಂಗಳೂರು, ಜ.8 : ಪೆಟ್ರೋಲ್ ಪಂಪ್ ಗಳಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಸ್ಕ್ಯಾನರ್ ಇಡುವುದು, ಗ್ರಾಹಕರು ತಮ್ಮ ಮೊಬೈಲಿನಲ್ಲಿ ನೇರವಾಗಿ ಹಣ ಪಾವತಿ ಮಾಡುವುದು ಸಾಮಾನ್ಯ. ಆದರೆ ಇಲ್ಲೊಂದು ಪೆಟ್ರೋಲ್ ಪಂಪ್ ಸಿಬ್ಬಂದಿಯೊಬ್ಬ ಸಂಸ್ಥೆಯ ಕ್ಯೂಆರ್ ಕೋಡ್ ಬದಲಿಗೆ ತನ್ನದೇ ವೈಯಕ್ತಿಕ ಕ್ಯೂಆರ್ ಕೋಡನ್ನು ಗ್ರಾಹಕರ ಮುಂದಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ನಗರದ ಬಂಗ್ರಕೂಳೂರು ನಲ್ಲಿರುವ ರಿಯಲನ್ಸ್ ಔಟ್ ಲೆಟ್ ಮ್ಯಾನೇಜರ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್ ನಲ್ಲಿ ಸುಮಾರು 15 ವರ್ಷಗಳಿಂದ ಸೂಪರ್ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಈ ಕೃತ್ಯ ಎಸಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಮೋಹನದಾಸ್ ಪೆಟ್ರೋಲ್ ಪಂಪ್ ನಲ್ಲಿ ಹಣಕಾಸು ವ್ಯವಹಾರದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದ. 2023ರ ಮಾರ್ಚ್ 1ರಿಂದ 2023 ಜುಲೈ 31ರ ವರೆಗೆ ಪೆಟ್ರೋಲ್
ಬಂಕ್ನಲ್ಲಿ ಅಧಿಕೃತ ಕ್ಯೂಆರ್ ಕೋಡ್ ಬದಲು, ತನ್ನ ವೈಯಕ್ತಿಕ ಖಾತೆಯ ಕ್ಯೂಆರ್ ಕೋಡ್ ಹಾಕಿದ್ದು ಗ್ರಾಹಕರು ಪೆಟ್ರೋಲ್ ಬಂಕ್ನದ್ದೇ ಎಂದು ನಂಬಿ ಹಣ ಪಾವತಿ ಮಾಡುತ್ತಿದ್ದರು. ಆಮೂಲಕ ಆರೋಪಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಟ್ಟಾರ ಶಾಖೆಯ ಬ್ಯಾಂಕ್ ಖಾತೆಗೆ ಒಟ್ಟು 58,85,333 ರೂ. ಹಣ ವರ್ಗಾವಣೆಯಾಗಿದ್ದು ಭಾರೀ ಮೋಸ ಎಸಗಿದ್ದಾನೆ. ಅಕ್ರಮವಾಗಿ ಹಣ ಜಮೆ ಮಾಡಿಕೊಂಡು ದ್ರೋಹ ಎಸಗಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ನ ಮ್ಯಾನೇಜರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Mangalore petrol pump cashier replaces QR code at fuel pump, swindles money of 58 lakhs at Reliance fule pump. Case has been registered at the CEN police station against MohanDas.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm