ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm