ಬ್ರೇಕಿಂಗ್ ನ್ಯೂಸ್
09-01-25 01:26 pm Mangaluru Correspondent ಕ್ರೈಂ
ಮಂಗಳೂರು, ಜ.10: ಹಳೆಯ ನಾಣ್ಯಗಳ ಖರೀದಿಸುತ್ತೇವೆಂದು ಹೇಳಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ನಡೆದಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು ಫೇಸ್ಬುಕ್ ನಲ್ಲಿ ಹಳೆಯ ನಾಣ್ಯಗಳನ್ನು ನೀಡಿದರೆ, ಖರೀದಿಸಿ ಹೆಚ್ಚಿನ ಹಣ ನೀಡುವುದಾಗಿ ತಿಳಿಸಿರುವ ಜಾಹೀರಾತನ್ನು ನೋಡಿದ್ದಾರೆ. ಬಳಿಕ ಆ ಜಾಹೀರಾತಿನಲ್ಲಿದ್ದ ವಾಟ್ಸ್ಆ್ಯಪ್ ಖಾತೆಗೆ ತಮ್ಮ ಬಳಿ ಇದ್ದ 15 ಹಳೆಯ ನಾಣ್ಯಗಳ ಫೋಟೋಗಳನ್ನು ಕಳುಹಿಸಿದ್ದರು. ಅದರಂತೆ, ಆ ಕಡೆಯಿಂದ 15 ಹಳೆಯ ನ್ಯಾಣ್ಯಗಳನ್ನು ಖರೀದಿಸಿ, ಅದಕ್ಕೆ ಪ್ರತಿಯಾಗಿ 49,00,000 ರೂ. ಹಣ ನೀಡುವುದಾಗಿ ತಿಳಿಸಿದ್ದರು.
ಬೇರೆ ಬೇರೆ ಶುಲ್ಕ ವಸೂಲಿ;
ಆದರೆ ನಾಣ್ಯ ಮಾರಾಟ ಮಾಡಬೇಕಿದ್ದರೆ ಮೊದಲಿಗೆ ಆರ್ಬಿಐ ನೋಂದಣಿ ಮಾಡಲು 750 ರೂ. ಹಣ ಪಾವತಿಸುವಂತೆ ಆರೋಪಿ ತಿಳಿಸಿದ್ದು, ಮಂಗಳೂರಿನ ವ್ಯಕ್ತಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಆ ಬಳಿಕ ಜಿಎಸ್ಟಿ ಪ್ರೊಸೀಡಿಂಗ್ ಡಾಟಾ ಶುಲ್ಕವೆಂದು 17,500 ರೂ., ಇನ್ಶೂರೆನ್ಸ್ ಶುಲ್ಕ 94,500 ರೂ., ಟಿಡಿಎಸ್ ಮೊತ್ತದ ಶುಲ್ಕ 49,499 ರೂ., ಜಿಪಿಎಸ್ ಶುಲ್ಕ 71,500 ರೂ., ಐಟಿಆರ್ ಶುಲ್ಕ 39,990 ರೂ. ಹಾಗೂ ಆರ್ಬಿಐ ನೋಟಿಸ್ ಪೆಂಡಿಂಗ್ ಶುಲ್ಕವೆಂದು 3,50,000 ರೂ. ಹಣ ಪಾವತಿಸುವಂತೆ ಆರೋಪಿ ವಾಟ್ಸ್ಆ್ಯಪ್ ನಂಬರ್ಗೆ ಸಂದೇಶ ಕಳಿಸಿದ್ದಾನೆ. ಆತ ತಿಳಿಸಿದಂತೆ ತಾವು ಹಣವನ್ನು ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆನಂತರ, 2024ರ ಡಿಸೆಂಬರ್ 15ರಂದು ತಮ್ಮ ಮೊಬೈಲ್ ನಂಬರ್ಗೆ ಕರೆ ಬಂದಿದ್ದು, ಆ ಕಡೆಯಿಂದ ವ್ಯಕ್ತಿ ತನ್ನನ್ನು ಮುಂಬೈ ಸೈಬರ್ ಪೊಲೀಸ್ ಆಯುಕ್ತ ಗೌರವ್ ಶಿವಾಜಿ ರಾವ್ ಶಿಂದೆ ಎಂಬುದಾಗಿ ಪರಿಚಯಿಸಿಕೊಂಡಿದ್ದು ಆರ್ಬಿಐ ಕಡೆಯಿಂದ ನೋಟಿಸ್ ಬಂದಿದ್ದು, ನಿಮ್ಮನ್ನು ಬಂಧಿಸುತ್ತೇವೆ. ಆದ್ದರಿಂದ ಆರ್ಬಿಐ ಗೈಡ್ಲೈನ್ಸ್ ಪ್ರಕಾರ 12,55,000 ರೂ. ಹಣ ಪಾವತಿಸಬೇಕು. ಬಳಿಕ ನಾವು ಚೆಕ್ ಮಾಡಿ, 1 ಗಂಟೆಯೊಳಗೆ ನಿಮ್ಮ ಖಾತೆಗೆ ಎಲ್ಲ ಹಣವನ್ನು ವರ್ಗಾಯಿಸುತ್ತೇವೆ ಎಂದು ನಂಬಿಸಿದ್ದಾನೆ.
ಅದರಂತೆ, ಅಪರಿಚಿತ ಕರೆಯ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಂಶಯಪಟ್ಟು ಅವರನ್ನು ಪ್ರಶ್ನಿಸಿದ್ದಕ್ಕೆ ಅಪರಿಚಿತನು ಏಕಾಏಕಿ ಗದರಿಸಲು ಶುರು ಮಾಡಿದ್ದಾನೆ. ಇದೇ ರೀತಿ 2024ರ ನವೆಂಬರ್ 25ರಿಂದ ಡಿ.30ರ ವರೆಗೆ ಅಪರಿಚಿತರು ಫೋನ್ ಕರೆ ಮಾಡಿ ಹಾಗೂ ವಾಟ್ಸ್ಆ್ಯಪ್ ಖಾತೆಗೆ ಸಂದೇಶ ಕಳಿಸಿ, ಜಿಎಸ್ಟಿ ಪ್ರೊಸೀಡಿಂಗ್ ಡಾಟಾ, ಇನ್ಶೂರೆನ್ಸ್ ಶುಲ್ಕ, ಟಿಡಿಎಸ್ ಮೊತ್ತದ ಶುಲ್ಕ, ಜಿಪಿಎಸ್ ಶುಲ್ಕ, ಐಟಿಆರ್ ಶುಲ್ಕ ಹಾಗೂ ಆರ್ಬಿಐ ನೋಟಿಸ್ ಪೆಂಡಿಂಗ್ ಹಾಗೂ ಇತರೆ ಶುಲ್ಕಗಳನ್ನು ಪಾವತಿಸುವಂತೆ ತಿಳಿಸಿ, ಹಂತ ಹಂತವಾಗಿ ಒಟ್ಟು 58,26,399 ರೂ. ಹಣವನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ತಮಗೆ ಮೋಸ ಮಾಡಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಮನವಿ ಮಾಡಿದ್ದಾರೆ.
In yet another case of online scam, a man from Mangaluru ended up losing Rs 58.26 lakh while attempting to sell old coins through an online platform. The victim came across the platform on Facebook, and as he connected with an individual from the platform, he ended up trapped in the foul play of cybercriminals.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm