ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 06:40 pm
HK News Desk
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm