ಬ್ರೇಕಿಂಗ್ ನ್ಯೂಸ್
11-01-25 10:21 pm Mangalore Correspondent ಕ್ರೈಂ
ಮಂಗಳೂರು, ಜ.11: ಪಾರ್ಟಿಯಲ್ಲಿ ಯುವತಿಗೆ ಅಮಲು ಪದಾರ್ಥ ಕೊಟ್ಟು ಆಕೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಮಂಗಳೂರು ನಗರದ ಲೈಟ್ ಹೌಸ್ ಹಿಲ್ ರಸ್ತೆಯ ನಿವಾಸಿ ಬ್ರಿಯಾನ್ ರಿಚರ್ಡ್ ಅಮ್ಮನ್ನ (34) ಶಿಕ್ಷೆಗೊಳಗಾದ ವ್ಯಕ್ತಿ. ಸಂತ್ರಸ್ತ ಯುವತಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಇವರ ಗ್ರಾಹಕರು ಮತ್ತು ಸ್ನೇಹಿತರಾದ ನೌಕಾಪಡೆಯಲ್ಲಿ ಉದ್ಯೋಗದಲ್ಲಿದ್ದ ಜಾಯ್ಲಿನ್ ಗ್ಲಾನೆಲ್ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಇದರ ನೆಪದಲ್ಲಿ 2021ರ ಫೆಬ್ರವರಿ 5ರಂದು ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೋಡಿಕಾಡು ಎಂಬಲ್ಲಿನ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು.
ಪಾರ್ಟಿಗೆ ಯುವತಿಯನ್ನೂ ಆಹ್ವಾನಿಸಿದ್ದು, ಜಾಯ್ಲಿನ್ ಅವರ ಸ್ನೇಹಿತನ ಕಾರಿನಲ್ಲಿ ಪುತ್ತೂರಿಗೆ ತೆರಳಿದ್ದರು. ಸ್ನೇಹಿತರು ಪಾರ್ಟಿಯಲ್ಲಿ ತೊಡಗಿದ್ದಾಗ ಯುವತಿಗೆ ವೈನ್ ಎಂದು ಕುಡಿಯಲು ಕೊಟ್ಟಿದ್ದರು. ಪಾರ್ಟಿ ಮಧ್ಯೆ ಜಾಯ್ಲಿನ್ ಸ್ನೇಹಿತ ಎಂದು ಆರೋಪಿ ಬ್ರಿಯಾನ್ ತನ್ನನ್ನು ಪರಿಚಯಿಸಿಕೊಂಡಿದ್ದ. ಪಾರ್ಟಿ ಮುಗಿದ ಬಳಿಕ ಎಲ್ಲರೂ ಗೆಸ್ಟ್ ಹೌಸ್ ರೂಮಿಗೆ ತೆರಳಿದ್ದರು. ಪಾರ್ಟಿ ಆಯೋಜಿಸಿದ್ದ ಜಾಯ್ಲಿನ್ ಮತ್ತು ರೆಬೆಕಾ ಎಂಬವರು ಯುವತಿ ಇದ್ದ ರೂಮಿನಲ್ಲೇ ಮಲಗಿದ್ದರು. ಅರ್ಧ ರಾತ್ರಿಯಲ್ಲಿ ಯುವತಿ ಎಚ್ಚರಗೊಂಡಾಗ ಜಾಯ್ಲಿನ್ ಮತ್ತು ರೆಬೆಕಾ ರೂಮಿನಲ್ಲಿ ಇರಲಿಲ್ಲ. ಈಕೆಯ ರೂಮಿನಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿ ಬ್ರಿಯಾನ್ ರಿಚರ್ಡ್ ಅಲ್ಲಿಗೆ ಬಂದು ಯುವತಿ ಮೇಲೆ ಬಲವಂತದಿಂದ ಅತ್ಯಾಚಾರ ನಡೆಸಿದ್ದಾನೆ. ಯುವತಿ ಮರುದಿನ ಫೆ.6ರಂದು ಪುತ್ತೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಳು.
ಯುವತಿಗೆ ತಿಳಿಯದಂತೆ ಆರೋಪಿ ಬ್ರಿಯಾನ್, ಕುಡಿಯಲು ಕೊಟ್ಟಿದ್ದ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿದ್ದ. ಅಮಲಿನಲ್ಲಿದ್ದಾಗ ಅತ್ಯಾಚಾರ ನಡೆಸಿದ್ದಾನೆ. ಪುತ್ತೂರು ಮಹಿಳಾ ಠಾಣೆ ನಿರೀಕ್ಷಕ ತಿಮ್ಮಪ್ಪ ನಾಯ್ಕ ದೋಷಾರೋಪ ಸಲ್ಲಿಸಿದ್ದರು. ಸಂತ್ರಸ್ತೆ ಪರವಾಗಿ 21 ಸಾಕ್ಷಿದಾರರು ಕೋರ್ಟಿನಲ್ಲಿ ಸಾಕ್ಷಿ ಹೇಳಿದ್ದು 37 ದಾಖಲೆಗಳನ್ನು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು ಆರೋಪ ಸಾಬೀತಾಗಿದ್ದರಿಂದ ತೀರ್ಪು ಪ್ರಕಟಿಸಿದ್ದು 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ.
The sixth additional District and Sessions Court has sentenced a man to ten years rigorous imprisonment for raping a young woman after spiking her drink at a party.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm