ಬ್ರೇಕಿಂಗ್ ನ್ಯೂಸ್
13-01-25 03:30 pm Mangaluru Correspondent ಕ್ರೈಂ
ಮಂಗಳೂರು, ಜ.13: ತಣ್ಣೀರುಬಾವಿ ಬಳಿಯ ಗಣೇಶ್ ಕಟ್ಟೆ ಎಂಬಲ್ಲಿ ಭಾನುವಾರ (ನಿನ್ನೆ) ರಾತ್ರಿ ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಾಂಜಾ ಮತ್ತು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಣಂಬೂರು ಠಾಣೆಯಲ್ಲಿ ಇತ್ತಂಡಗಳಿಂದ ದೂರು, ಪ್ರತಿದೂರು ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಗುಂಪುಗಳ ನಡುವೆ ಹೊಡೆದಾಟ ಆಗಿದೆಯೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಯತ್ನವೂ ನಡೆದಿದೆ.
ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೇದುತ್ತಿದ್ದಾಗ ಪ್ರೀತಂ ಮತ್ತು ಸನ್ವಿತ್ ಎಂಬವರು ಸ್ಥಳಕ್ಕೆ ಬಂದು ಸಿಗರ್ ಲೈಟ್ ಕೇಳಿದ್ದಾರೆ. ಪ್ರಜ್ವಲ್ ಸಿಗರ್ ಲೈಟ್ ನೀಡಿದ್ದು, ಹಿಂತಿರುಗಿ ನೀಡದೇ ಇದ್ದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರು ಪರಸ್ಪರ ಹೊಡೆದಾಡಿದ್ದಾರೆ. ಘಟನೆ ಸಂಬಂಧಿಸಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಒಬ್ಬನನ್ನು ಅಡ್ಮಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಾರ್ತಿಕ್ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದು, ಇತರ 4-5 ಜನರು ಸೇರಿ ಮರದ ದೊಣ್ಣೆಯಿಂದ ಪ್ರಜ್ವಲ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ. ಪ್ರೀತಂ ಎಂಬಾತ ನೀಡಿದ ದೂರಿನಂತೆ, ಪಣಂಬೂರು ಠಾಣೆಯಲ್ಲಿ ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಅವರನ್ನು ಆರೋಪಿಗಳೆಂದು ಹೇಳಿದ್ದು, ಈ ಪೈಕಿ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಯಾಗಿ ಪ್ರಜ್ವಲ್ ನೀಡಿದ ದೂರಿನಂತೆ, ಪ್ರೀತಂ ಮತ್ತು ಸನ್ವಿತ್ ಹಾಗೂ ಇತರರ ಮೇಲೆ ದೂರು ದಾಖಲಾಗಿದೆ.
ಸದ್ರಿ ಘಟನೆಗೆ ಸಂಬಂಧಿಸಿ ವಾಟ್ಸಪ್ ನಲ್ಲಿ ಬೆಂಗ್ರೆ ಪರಿಸರದಲ್ಲಿ ಹಿಂದುಗಳ ಮನೆಯನ್ನು ಗುರಿಯಾಗಿಸಿ ತಲವಾರು ಸಹಿತ ಮುಸ್ಲಿಮರು ನುಗ್ಗಿದ್ದು ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಾರಿಯಾಗುವ ಯತ್ನದಲ್ಲಿ ಒಬ್ಬನನ್ನು ಸ್ಥಳೀಯರು ಸೆರೆಹಿಡಿದಿದ್ದಾಗಿ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಣ್ಣೀರುಬಾವಿ, ಬೆಂಗ್ರೆ ಪರಿಸರದಲ್ಲಿ ಗಾಂಜಾ ವ್ಯಸನ ಜೋರಾಗಿದ್ದು, ಯುವಕರು ಹಗಲಿನಲ್ಲೇ ತೇಲಾಡುತ್ತ ಇರುತ್ತಾರೆ. ಎರಡು ದಿನಗಳಿಂದ ಬೀಚ್ ಉತ್ಸವ ಕಾರಣಕ್ಕೆ ಯುವಕರು ಜಾಲಿ ಮಾಡುತ್ತಿದ್ದರು. ಅದೇ ಗುಂಗಿನಲ್ಲಿ ಗಲಾಟೆ ಆಗಿರುವ ಸಾಧ್ಯತೆಯಿದೆ.
Mangalore Fight near Tannirbhavi beach Two cases filed for spreading communal rumours, four arrested. An altercation late on January 12 near Ganesh Katte, Tannirbhavi, under the jurisdiction of Panambur police station, escalated into a violent clash between two groups
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm