ಬ್ರೇಕಿಂಗ್ ನ್ಯೂಸ್
15-01-25 11:06 pm Mangalore Correspondent ಕ್ರೈಂ
ಮಂಗಳೂರು, ಜ.16: ನಕಲಿ ಷೇರು ಮಾರುಕಟ್ಟೆ ಜಾಲದ ಮೂಲಕ ಅಪರಿಚಿತ ವ್ಯಕ್ತಿಗಳು ಮಂಗಳೂರಿನ ವ್ಯಕ್ತಿಯೊಬ್ಬರಿಂದ 77.96 ಲಕ್ಷ ರೂಪಾಯಿ ಹಣ ಪೀಕಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯೊಂದರ ಬೆನ್ನು ಹತ್ತಿ ಕಮಿಷನ್ ಆಸೆಗೆ ಹಣ ಪಡೆದು ಡ್ರಾ ಮಾಡಿಕೊಟ್ಟ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 108/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 318(4),3(5) ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಾಗಿತ್ತು. ಅಪಚಿರಿತ ವ್ಯಕ್ತಿ ವಾಟ್ಸ್ ಆಪ್ ನಲ್ಲಿ ಮೆಸೇಜ್ ಮಾಡಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಒಟ್ಟು 77,96,322.08/- ಹಣವನ್ನು ಪಡೆದು ವಂಚನೆ ಮಾಡಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ ರೂ 26,27,114.4/- ಹಣ ವರ್ಗಾವಣೆಯಾಗಿದ್ದು ಪತ್ತೆಯಾಗಿದೆ. ನಂತರದಲ್ಲಿ ಸದ್ರಿ ಆರೋಪಿಯ ಬ್ಯಾಂಕ್ ಖಾತೆಯಿಂದ ಕೇರಳದ ಕಣ್ಣೂರು ನಿವಾಸಿ ಉಮ್ಮರ್ ವಲಿಯ ಪರಂಬತ್ (41) ಎಂಬಾತನ ಬ್ಯಾಂಕ್ ಖಾತೆಗೆ ರೂ,6,00,000/- ರೂ. ಹಣ ರವಾನೆಯಾಗಿದ್ದು ಕಂಡುಬಂದಿತ್ತು. ಈ ಬಗ್ಗೆ ತನಿಖೆ ಕೈಗೊಂಡಾಗ ಕಣ್ಣೂರು ಜಿಲ್ಲೆಯ ಪತಾಯಕುನ್ನು ನಿವಾಸಿ ರಿಯಾಸ್ ಎಂ.ವಿ (45) ಎಂಬಾತ ಹಣವನ್ನು ವರ್ಗಾವಣೆ ಮಾಡಿಸಿದ್ದು, ಹಣ ವಿಥ್ ಡ್ರಾ ಮಾಡಿಕೊಟ್ಟಲ್ಲಿ ಕಮಿಷನ್ ನೀಡುವುದಾಗಿ ತಿಳಿಸಿದ್ದ ಎನ್ನುವ ಮಾಹಿತಿ ಸಿಕ್ಕಿತ್ತು. ಇದರಂತೆ, ರಿಯಾಸ್ ಸೂಚನೆಯಂತೆ 6,00,000 ಲಕ್ಷ ಹಣವನ್ನು ವಿಥ್ ಡ್ರಾ ಮಾಡಿರುವುದಾಗಿ ತಿಳಿಸಿದ್ದಾನೆ. ಸದ್ಯ ಪ್ರಕರಣದಲ್ಲಿ ಭಾಗಿಯಾದ ಈ ಇಬ್ಬರು ಕೇರಳ ಮೂಲದ ವ್ಯಕ್ತಿಗಳನ್ನು ದಸ್ತಗಿರಿ ಮಾಡಲಾಗಿದೆ. ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಎಂ.ಪಿ ಮತ್ತು ಪೊಲೀಸ್ ಉಪ ನಿರೀಕ್ಷಕ ಗುರಪ್ಪ ಕಾಂತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Fake share market scam, 78 lakhs looted by fraudsters, two arrested by Mangalore police for helping fraudsters to withdraw money.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm