ಬ್ರೇಕಿಂಗ್ ನ್ಯೂಸ್
17-01-25 03:02 pm Mangaluru Correspondent ಕ್ರೈಂ
ಉಳ್ಳಾಲ, ಜ.17: ಮಟ ಮಟ ಮಧ್ಯಾಹ್ನವೇ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ. ಬೀದರಿನಲ್ಲಿ ನಿನ್ನೆ ಎಟಿಎಂ ಹಣ ತುಂಬುವಾಗ ಗನ್ ಶೂಟ್ ಮಾಡಿದ ದರೋಡೆ ಬೆನ್ನಲ್ಲೇ ದಕ್ಷಿಣ ಕರ್ನಾಟಕದ ತುದಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ಕಾರಿನಲ್ಲಿ ಬಂದ ಆಗಂತುಕರಲ್ಲಿ ಐವರು ಬ್ಯಾಂಕ್ ಶಾಖೆಗೆ ನುಗ್ಗಿದ್ದು ಕಚೇರಿಯಲ್ಲಿದ್ದ ಸಿಬ್ಬಂದಿಗಳಿಗೆ ಮಾರಕಾಯುಧಗಳನ್ನ ತೋರಿಸಿ ಸುಮಾರು ಹತ್ತು ಕೋಟಿಗೂ ಅಧಿಕ ಬೆಲೆಬಾಳುವ ಚಿನ್ನಾಭರಣ, ಸುಮಾರು ಐದು ಲಕ್ಷ ರೂಪಾಯಿ ನಗದನ್ನ ದರೋಡೆಗೈದು ಮಂಗಳೂರು ಕಡೆ ಕಾರಿನಲ್ಲಿ ಪರಾರಿಯಾಗಿದ್ದಾರೆ.






ಕೆ.ಸಿ ರೋಡ್ ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ದರೋಡೆ ನಡೆದಿದೆ. ಬ್ಯಾಂಕಿನ ಕೆಳಗಿನ ಅಂತಸ್ತಿನ ಬೇಕರಿಯಲ್ಲಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಬ್ಯಾಂಕಿನ ಸಿಬ್ಬಂದಿಗಳ ಬೊಬ್ಬೆ ಕೇಳಿ ಮೇಲೆ ಓಡಿದ್ದಾರೆ. ವಿದ್ಯಾರ್ಥಿಗಳಿಗೆ ಆಗಂತುಕರು ಗನ್ ತೋರಿಸಿ ಬೆದರಿಸಿದ್ದಾರೆ.
ಎಸಿಪಿ ಧನ್ಯ ನಾಯಕ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳನ್ನ ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವಿಶೇಷ ಅಂದ್ರೆ, ಬ್ಯಾಂಕ್ ಒಳಗಿನ ಸಿಸಿಟಿವಿ ಕ್ಯಾಮೆರಾವನ್ನು ಸರ್ವಿಸ್ ಮಾಡುತ್ತಿದ್ದ ವೇಳೆಯೇ ಘಟನೆ ನಡೆದಿದೆ. ಹೊರಗಿನ ಕ್ಯಾಮೆರಾದಲ್ಲಿ ಆರೋಪಿಗಳು ಪಲಾಯನಗೈಯುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಬ್ಯಾಂಕ್ ಬಗ್ಗೆ ತಿಳಿದಿರುವ ಮಂದಿಯೇ ದರೋಡೆ ನಡೆಸಿರುವಂತೆ ಕಂಡುಬಂದಿದೆ.
Bank robbery in Kotekar Vyavasaaya Seva Sahakaari Bank, Armed gang robs gold, cash in daylight heist. A daring robbery was carried out in broad daylight at the Kotekar Cooperative Society Bank, K C Road branch, by a gang of five armed individuals.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm