ಬ್ರೇಕಿಂಗ್ ನ್ಯೂಸ್
17-01-25 03:02 pm Mangaluru Correspondent ಕ್ರೈಂ
ಉಳ್ಳಾಲ, ಜ.17: ಮಟ ಮಟ ಮಧ್ಯಾಹ್ನವೇ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ. ಬೀದರಿನಲ್ಲಿ ನಿನ್ನೆ ಎಟಿಎಂ ಹಣ ತುಂಬುವಾಗ ಗನ್ ಶೂಟ್ ಮಾಡಿದ ದರೋಡೆ ಬೆನ್ನಲ್ಲೇ ದಕ್ಷಿಣ ಕರ್ನಾಟಕದ ತುದಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ಕಾರಿನಲ್ಲಿ ಬಂದ ಆಗಂತುಕರಲ್ಲಿ ಐವರು ಬ್ಯಾಂಕ್ ಶಾಖೆಗೆ ನುಗ್ಗಿದ್ದು ಕಚೇರಿಯಲ್ಲಿದ್ದ ಸಿಬ್ಬಂದಿಗಳಿಗೆ ಮಾರಕಾಯುಧಗಳನ್ನ ತೋರಿಸಿ ಸುಮಾರು ಹತ್ತು ಕೋಟಿಗೂ ಅಧಿಕ ಬೆಲೆಬಾಳುವ ಚಿನ್ನಾಭರಣ, ಸುಮಾರು ಐದು ಲಕ್ಷ ರೂಪಾಯಿ ನಗದನ್ನ ದರೋಡೆಗೈದು ಮಂಗಳೂರು ಕಡೆ ಕಾರಿನಲ್ಲಿ ಪರಾರಿಯಾಗಿದ್ದಾರೆ.






ಕೆ.ಸಿ ರೋಡ್ ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ದರೋಡೆ ನಡೆದಿದೆ. ಬ್ಯಾಂಕಿನ ಕೆಳಗಿನ ಅಂತಸ್ತಿನ ಬೇಕರಿಯಲ್ಲಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಬ್ಯಾಂಕಿನ ಸಿಬ್ಬಂದಿಗಳ ಬೊಬ್ಬೆ ಕೇಳಿ ಮೇಲೆ ಓಡಿದ್ದಾರೆ. ವಿದ್ಯಾರ್ಥಿಗಳಿಗೆ ಆಗಂತುಕರು ಗನ್ ತೋರಿಸಿ ಬೆದರಿಸಿದ್ದಾರೆ.
ಎಸಿಪಿ ಧನ್ಯ ನಾಯಕ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳನ್ನ ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವಿಶೇಷ ಅಂದ್ರೆ, ಬ್ಯಾಂಕ್ ಒಳಗಿನ ಸಿಸಿಟಿವಿ ಕ್ಯಾಮೆರಾವನ್ನು ಸರ್ವಿಸ್ ಮಾಡುತ್ತಿದ್ದ ವೇಳೆಯೇ ಘಟನೆ ನಡೆದಿದೆ. ಹೊರಗಿನ ಕ್ಯಾಮೆರಾದಲ್ಲಿ ಆರೋಪಿಗಳು ಪಲಾಯನಗೈಯುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಬ್ಯಾಂಕ್ ಬಗ್ಗೆ ತಿಳಿದಿರುವ ಮಂದಿಯೇ ದರೋಡೆ ನಡೆಸಿರುವಂತೆ ಕಂಡುಬಂದಿದೆ.
Bank robbery in Kotekar Vyavasaaya Seva Sahakaari Bank, Armed gang robs gold, cash in daylight heist. A daring robbery was carried out in broad daylight at the Kotekar Cooperative Society Bank, K C Road branch, by a gang of five armed individuals.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm