ಬ್ರೇಕಿಂಗ್ ನ್ಯೂಸ್
18-01-25 10:28 am Mangalore Correspondent ಕ್ರೈಂ
ಪುತ್ತೂರು, ಜ.18: ಮಗನಿಗೆ ಗುಂಡಿಕ್ಕಲು ಹೋಗಿ ಪತ್ನಿ ಬಲಿಯಾಗಿದ್ದು ಇದರಿಂದ ನೊಂದುಕೊಂಡ ಪತಿಯೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ನೆಕ್ರಾಜೆಯಲ್ಲಿ ನಡೆದಿದೆ.
ನೆಕ್ರಾಜೆ ಗ್ರಾಮದ ರಾಮಚಂದ್ರ ಗೌಡ(53) ಆತ್ಮಹತ್ಯೆ ಮಾಡಿಕೊಂಡರೆ, ಅವರ ಪತ್ನಿ ವಿನೋದ(45) ಗುಂಡೇಟಿಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ರಾಮಚಂದ್ರ ಗೌಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಮಗನ ಬಗ್ಗೆ ತಂದೆ ಸಿಟ್ಟಾಗಿ ಕೋವಿ ತೆಗೆದುಕೊಂಡು ಬಂದಿದ್ದರು. ಮಗನಿಗೆ ಗುರಿಯಿಟ್ಟು ಗುಂಡು ಹಾರಿಸಲು ಯತ್ನಿಸಿದಾಗ, ಪತ್ನಿ ವಿನೋದ ತಡೆಯಲು ಬಂದಿದ್ದರು.
ಪತಿಯನ್ನು ಹಿಂದಕ್ಕೆ ದೂಡುತ್ತಲೇ ಬೆಡ್ ರೂಮಿಗೆ ತಳ್ಳಲು ಯತ್ನಿಸಿದಾಗ, ಕೋವಿ ಟ್ರಿಗ್ಗರ್ ಒತ್ತಲ್ಪಟ್ಟು ಪತ್ನಿಯ ಎದೆಗೆ ಗುಂಡು ಹೊಕ್ಕಿತ್ತು. ಇದರಿಂದ ಪತ್ನಿ ವಿನೋದ ತೀವ್ರ ಗಾಯಗೊಂಡು ನೆಲಕ್ಕುರುಳಿ ಪ್ರಾಣ ಕಳಕೊಂಡಿದ್ದಾರೆ. ಪತ್ನಿ ನೆಲಕ್ಕೆ ಬಿದ್ದಿದ್ದನ್ನು ನೋಡಿ ಭಯಗೊಂಡು ಇನ್ನು ತಾನು ಕೂಡ ಬದುಕುವುದಿಲ್ಲ ಎಂದು ಹೇಳಿ ರಬ್ಬರ್ ಗಿಡಕ್ಕೆ ಹಾಕಲು ತಂದಿದ್ದ ಕೀಟ ನಾಶಕವನ್ನು ರಾಮಚಂದ್ರ ಗೌಡ ಕುಡಿದು ಪತ್ನಿ ಬಿದ್ದ ಜಾಗದಲ್ಲೇ ಬಿದ್ದುಕೊಂಡಿದ್ದಾರೆ.
ಮಗ ಪ್ರಶಾಂತ್ ಕಣ್ಣೆದುರಲ್ಲೇ ಘಟನೆ ನಡೆದಿದ್ದು ಪತಿ- ಪತ್ನಿ ದುರಂತ ಸಾವು ಕಂಡಿದ್ದಾರೆ. ಕುಡಿತದ ಚಟ, ಮಗನ ಮೇಲಿನ ಸಿಟ್ಟು, ಕೈಗೆ ಬಂದ ಬಂದೂಕು ಮನೆಯೊಳಗೆ ಸ್ಮಶಾನ ಸೃಷ್ಟಿಸಿದೆ. ಈ ಹಿಂದೆಯೂ ರಾಮಚಂದ್ರ ಗೌಡ ಬಂದೂಕು ಹಿಡಿದು ಪತ್ನಿ, ಮಗನನ್ನು ಮನೆಯಿಂದ ಓಡಿಸಿದ್ದರು. ಆನಂತರ, ಪತ್ನಿಯ ದೂರಿನಂತೆ ಕೋವಿಯನ್ನು ಡಿಪಾಸಿಟ್ ಮಾಡಲಾಗಿತ್ತು. ಇತ್ತೀಚೆಗೆ ಆನೆ, ಇತರ ಪ್ರಾಣಿಗಳ ಉಪಟಳದಿಂದಾಗಿ ಕೋವಿಯನ್ನು ಮರಳಿ ಮನೆಗೆ ತರಿಸಿಕೊಂಡಿದ್ದರು. ಅದೇ ಕೋವಿಯನ್ನು ಕುಡಿದ ಅಮಲಿನಲ್ಲಿ ಮತ್ತೆ ಹಿಡಿದುಕೊಂಡು ಬಂದಿದ್ದರು. ಲೋಡ್ ಮಾಡಿ ಇಟ್ಟಿದ್ದರಿಂದ ಟ್ರಿಗ್ಗರ್ ಒತ್ತುತ್ತಲೇ ಪತ್ನಿಯ ಪ್ರಾಣ ಹಾರಿ ಹೋಗಿದೆ.
A man in an inebriated condition killed his wife by shooting her and later consumed acid and ended his own life, at Nellur Kemraje village in Sullia on Friday late night. The deceased are Ramachandra Gowda and his wife Vinoda Kumari.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm