ಬ್ರೇಕಿಂಗ್ ನ್ಯೂಸ್
20-01-25 05:20 pm HK News Desk ಕ್ರೈಂ
ದಾವಣಗೆರೆ, ಜ.20: ಮಂಗಳೂರು ಬ್ಯಾಂಕ್ ದರೋಡೆಗೂ ದಾವಣಗೆರೆಯಲ್ಲಿ ಮೂರು ತಿಂಗಳ ಹಿಂದೆ ನಡೆದ ದರೋಡೆಗೂ ಲಿಂಕ್ ಇದೆಯೇ ಎನ್ನುವ ಅನುಮಾನ ಬಂದಿದೆ. ನ್ಯಾಮತಿ ಪಟ್ಟಣದಲ್ಲಿ ಎಸ್ ಬಿಐ ಬ್ಯಾಂಕ್ ದರೋಡೆ ನಡೆದು ಮೂರು ತಿಂಗಳಾದರೂ, ಕಳ್ಳರ ಹೆಜ್ಜೆ ಗುರುತು ಪತ್ತೆ ಸಾಧ್ಯವಾಗದೆ ಒಟ್ಟು ಪ್ರಕರಣ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಅಕ್ಟೋಬರ್ 28ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಎಸ್ ಬಿ ಐ ಬ್ಯಾಂಕ್ ನುಗ್ಗಿದ್ದ ಆಗಂತುಕರು ಒಟ್ಟು 509 ಗ್ರಾಹಕರಿಗೆ ಸಂಬಂಧಪಟ್ಟ 12.95 ಕೋಟಿ ರೂ. ಮೌಲ್ಯದ ಚಿನ್ನವನ್ನು ಕದ್ದೊಯ್ದಿದ್ದರು. ಗ್ಯಾಸ್ ಕಟರ್ ನಿಂದ ಬ್ಯಾಂಕ್ ಕಿಟಕಿ, ಸರಳು ಕಟ್ ಮಾಡಿ ಲಾಕರಿನಲ್ಲಿಟ್ಟಿದ್ದ ಚಿನ್ನ ಎಗರಿಸಿದ್ದರು. ಬ್ಯಾಂಕ್ ಒಳಗಿದ್ದ ಸಿಸಿಟಿವಿಯ ಡಿವಿಆರ್ ಅನ್ನೂ ಜೊತೆಗೆ ಒಯ್ದಿದ್ದರು. ಪ್ರಕರಣ ಪತ್ತೆಗಾಗಿ ಐದು ಪೊಲೀಸರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.


ಎಎಸ್ಪಿ ನೇತೃತ್ವದಲ್ಲಿ ಪೊಲೀಸ್ ತಂಡಗಳು ಮೂರು ತಿಂಗಳಿನಿಂದ ಹಗಲು ರಾತ್ರಿ ತನಿಖೆ ನಡೆಸುತ್ತಿದ್ದರೂ, ಯಾವುದೇ ಸುಳಿವು ಸಿಕ್ಕಿಲ್ಲ. ತಮಿಳುನಾಡು ಹಾಗು ಬಿಹಾರ ಮೂಲದ ಗ್ಯಾಂಗ್ ಸೇರಿ ಕಳ್ಳತನ ಮಾಡಿರುವ ಶಂಕೆಯಿದೆ. ಫೋನ್ ಬಳಸದೇ, ಸಿಸಿಟಿವಿಯಲ್ಲಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೇ ಕಳ್ಳತನ ಮಾಡಿದ್ದರಿಂದ ಪತ್ತೆ ಕಾರ್ಯ ಸವಾಲೆನಿಸಿದೆ.
ನ್ಯಾಮತಿ ಪಟ್ಟಣದಲ್ಲಿ ಪೊಲೀಸರು ಸಾವಿರಾರು ಮೊಬೈಲ್ ಗಳ ಸಿಡಿಆರ್ ಮತ್ತು ಸಿಸಿಟಿವಿ ದೃಶ್ಯಗಳನ್ನು ಚೆಕ್ ಮಾಡಿದ್ದಾರೆ. ಆದರೂ ಪೊಲೀಸರಿಗೆ ಆರೋಪಿಗಳ ಮಾಹಿತಿ ಸಂಗ್ರಹ ಸಾಧ್ಯವಾಗಿಲ್ಲ. ಸಾಲ ಇಟ್ಟು ಚಿನ್ನವನ್ನೇ ಕಳಕೊಂಡಿರುವ ಮಂದಿ ದಿನವೂ ಗೋಳಾಡುತ್ತಿದ್ದಾರೆ.
ಮಂಗಳೂರಿನಲ್ಲಿಯೂ ಇದೇ ರೀತಿ ಬ್ಯಾಂಕ್ ದರೋಡೆಯಾಗಿದ್ದು ಚಿನ್ನಾಭರಣವನ್ನು ಹೊತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕು ದಿನ ಕಳೆದರೂ ಆರೋಪಿಗಳ ಸುಳಿವು ಪತ್ತೆ ಮಾಡಲು ಸಾಧ್ಯವಾಗಿಲ್ಲ.
Bank robbery link between Davangere and Mangalore Kotekar. Davangere sbi bank robbery was upto Rs 12.95 crore and still on breakthrough in the case so far. Similarly even Mangalore Kotekar case has got no leads so far.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm