ಬ್ರೇಕಿಂಗ್ ನ್ಯೂಸ್
20-01-25 07:19 pm Mangaluru Correspondent ಕ್ರೈಂ
ಮಂಗಳೂರು, ಜ.20: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗನ್ ಡಿ. ದೇವರ್(35), ಯೋಶುವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ(36) ಎಂಬ ಮೂವರನ್ನು ಅರೆಸ್ಟ್ ಮಾಡಲಾಗಿದೆ. ದರೋಡೆ ಪ್ರಕರಣ ಸಂಬಂಧಿಸಿ ಒಟ್ಟು ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮುಂಬೈ, ಕೇರಳ, ತಮಿಳುನಾಡಿಗೆ ಪೊಲೀಸರು ತೆರಳಿದ್ದು, ಮಾಹಿತಿ ಆಧರಿಸಿ ಕಾರನ್ನು ಬೆನ್ನಟ್ಟಿ ಹೋಗಿದ್ದರು. ಈ ವೇಳೆ, ತಿರುನಲ್ವೇಲಿಯನಲ್ಲಿ ಮೂವರು ಸಿಕ್ಕಿಬಿದ್ದಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ಕಾರು, ಎರಡು ಪಿಸ್ತೂಲ್, ಚೂರಿ ಮತ್ತು ಕಳವಾದ ನಗದು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ ಮಹಜರು ಬಳಿಕ ತಿಳಿಯಬೇಕಾಗಿದೆ. ಕೋಟೆಕಾರು ಬ್ಯಾಂಕಿನಿಂದ ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ದರೋಡೆಯಾಗಿತ್ತು. ಮುಂಬೈ ಮೂಲದ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಕಮಿಷನರ್ ಅಗರ್ವಾಲ್ ತಿಳಿಸಿದ್ದಾರೆ.








ದರೋಡೆ ಬಳಿಕ ಆರೋಪಿಗಳು ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ತಂಡದಲ್ಲಿ ಇನ್ನೂ ಹಲವರಿದ್ದಾರೆ, ಬಂಧಿತರಿಂದ ಮಹಾರಾಷ್ಟ್ರ ಮೂಲದ ಕಾರನ್ನು ವಶಕ್ಕೆ ಪಡೆದಿದ್ದೇವೆ, ಚಿನ್ನ ಇರುವ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದಿದ್ದು ಚಿನ್ನದ ಮೌಲ್ಯದ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ಸ್ಥಳೀಯರು ಕೂಡ ಭಾಗಿಯಾಗಿರುವ ಶಂಕೆಯಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ಬಂಧಿತ ಮೂವರು ಕೂಡ ಪ್ರಮುಖ ಆರೋಪಿಗಳೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ದರೋಡೆ ಕೃತ್ಯದ ಬಳಿಕ ಕೇರಳಕ್ಕೆ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು. ಆನಂತರ, ಕೃತ್ಯಕ್ಕೆ ಬಳಸಿದ್ದ ಕಾರು ತಲಪಾಡಿ ಟೋಲ್ ಗೇಟ್ ನಲ್ಲಿ ಪಾಸ್ ಆಗಿರುವುದು ಪತ್ತೆಯಾಗಿತ್ತು. ಆದರೆ ಆ ಕಾರಿನಲ್ಲಿ ಚಾಲಕ ಬಿಟ್ಟರೆ ಬೇರಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಆರೋಪಿಗಳು ಆ ಕಾರು ಬಿಟ್ಟು ಬೇರೆ ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರನ್ನು ಅರೆಸ್ಟ್ ಅಂತ ತೋರಿಸಿದ್ದು, ಪ್ರಕರಣದಲ್ಲಿ ನಾನಾ ರೀತಿಯ ಪ್ರಶ್ನೆಗಳು, ಅನುಮಾನಗಳು ಎದ್ದಿವೆ. ಇದಕ್ಕೆಲ್ಲ ಪೊಲೀಸರೇ ಉತ್ತರ ಕೊಡಬೇಕಾಗಿದೆ.
Mangalore Kotekar Bank Robbery, Three arrested from Tirunelveli in Tamil Nadu by Mangalore Police. Mangalore Kotekar Bank Robbery: Three arrested from Tirunelveli in Tamil Nadu by Mangalore Police. In a major bust, the Mangalore police have arrested three persons in connection to the Kotekar bank robbery. The arrested are identified as Murugandi Devar, Prakash Josuha, and Manivannan.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm