ಬ್ರೇಕಿಂಗ್ ನ್ಯೂಸ್
20-01-25 07:19 pm Mangaluru Correspondent ಕ್ರೈಂ
ಮಂಗಳೂರು, ಜ.20: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗನ್ ಡಿ. ದೇವರ್(35), ಯೋಶುವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ(36) ಎಂಬ ಮೂವರನ್ನು ಅರೆಸ್ಟ್ ಮಾಡಲಾಗಿದೆ. ದರೋಡೆ ಪ್ರಕರಣ ಸಂಬಂಧಿಸಿ ಒಟ್ಟು ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮುಂಬೈ, ಕೇರಳ, ತಮಿಳುನಾಡಿಗೆ ಪೊಲೀಸರು ತೆರಳಿದ್ದು, ಮಾಹಿತಿ ಆಧರಿಸಿ ಕಾರನ್ನು ಬೆನ್ನಟ್ಟಿ ಹೋಗಿದ್ದರು. ಈ ವೇಳೆ, ತಿರುನಲ್ವೇಲಿಯನಲ್ಲಿ ಮೂವರು ಸಿಕ್ಕಿಬಿದ್ದಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ಕಾರು, ಎರಡು ಪಿಸ್ತೂಲ್, ಚೂರಿ ಮತ್ತು ಕಳವಾದ ನಗದು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ ಮಹಜರು ಬಳಿಕ ತಿಳಿಯಬೇಕಾಗಿದೆ. ಕೋಟೆಕಾರು ಬ್ಯಾಂಕಿನಿಂದ ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ದರೋಡೆಯಾಗಿತ್ತು. ಮುಂಬೈ ಮೂಲದ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಕಮಿಷನರ್ ಅಗರ್ವಾಲ್ ತಿಳಿಸಿದ್ದಾರೆ.








ದರೋಡೆ ಬಳಿಕ ಆರೋಪಿಗಳು ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ತಂಡದಲ್ಲಿ ಇನ್ನೂ ಹಲವರಿದ್ದಾರೆ, ಬಂಧಿತರಿಂದ ಮಹಾರಾಷ್ಟ್ರ ಮೂಲದ ಕಾರನ್ನು ವಶಕ್ಕೆ ಪಡೆದಿದ್ದೇವೆ, ಚಿನ್ನ ಇರುವ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದಿದ್ದು ಚಿನ್ನದ ಮೌಲ್ಯದ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ಸ್ಥಳೀಯರು ಕೂಡ ಭಾಗಿಯಾಗಿರುವ ಶಂಕೆಯಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ಬಂಧಿತ ಮೂವರು ಕೂಡ ಪ್ರಮುಖ ಆರೋಪಿಗಳೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ದರೋಡೆ ಕೃತ್ಯದ ಬಳಿಕ ಕೇರಳಕ್ಕೆ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು. ಆನಂತರ, ಕೃತ್ಯಕ್ಕೆ ಬಳಸಿದ್ದ ಕಾರು ತಲಪಾಡಿ ಟೋಲ್ ಗೇಟ್ ನಲ್ಲಿ ಪಾಸ್ ಆಗಿರುವುದು ಪತ್ತೆಯಾಗಿತ್ತು. ಆದರೆ ಆ ಕಾರಿನಲ್ಲಿ ಚಾಲಕ ಬಿಟ್ಟರೆ ಬೇರಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಆರೋಪಿಗಳು ಆ ಕಾರು ಬಿಟ್ಟು ಬೇರೆ ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರನ್ನು ಅರೆಸ್ಟ್ ಅಂತ ತೋರಿಸಿದ್ದು, ಪ್ರಕರಣದಲ್ಲಿ ನಾನಾ ರೀತಿಯ ಪ್ರಶ್ನೆಗಳು, ಅನುಮಾನಗಳು ಎದ್ದಿವೆ. ಇದಕ್ಕೆಲ್ಲ ಪೊಲೀಸರೇ ಉತ್ತರ ಕೊಡಬೇಕಾಗಿದೆ.
Mangalore Kotekar Bank Robbery, Three arrested from Tirunelveli in Tamil Nadu by Mangalore Police. Mangalore Kotekar Bank Robbery: Three arrested from Tirunelveli in Tamil Nadu by Mangalore Police. In a major bust, the Mangalore police have arrested three persons in connection to the Kotekar bank robbery. The arrested are identified as Murugandi Devar, Prakash Josuha, and Manivannan.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm