ಬ್ರೇಕಿಂಗ್ ನ್ಯೂಸ್
21-01-25 06:00 pm Mangaluru Correspondent ಕ್ರೈಂ
ಮಂಗಳೂರು, ಜ.2: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೇಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆಸಿ ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ.






ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ, ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯವಾಗಿದ್ದು ಅವರನ್ನು ಮತ್ತು ಗುಂಡೇಟು ಪಡೆದ ಆರೋಪಿ ಕಣ್ಣನ್ ಮಣಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೈರಿಂಗ್ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಭದ್ರತಾ ಕಾರ್ಯ ನಡೆಸಿದ್ದಾರೆ. ದರೋಡೆ ಪ್ರಕರಣ ಸಂಬಂಧಿಸಿ ಮುರುಗನ್ ಡಿ ದೇವರ್, ಕಣ್ಣನ್ ಮಣಿ ಮತ್ತು ಯೋಶುವಾ ರಾಜೇಂದ್ರನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಒಬ್ಬನನ್ನು ಮಾತ್ರ ಸ್ಥಳ ಮಹಜರಿಗಾಗಿ ಕರೆದೊಯ್ಯಲಾಗಿತ್ತು. ಇವರನ್ನು ತಮಿಳುನಾಡಿನ ಸ್ಥಳೀಯ ಕೋರ್ಟಿನಲ್ಲಿ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
Kotekar robbery mangalore, accused kanan mani was shot in the leg by police while trying to assault on the police and flee during the spot Mahajar at kotekar bank.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm