ಬ್ರೇಕಿಂಗ್ ನ್ಯೂಸ್
21-01-25 06:00 pm Mangaluru Correspondent ಕ್ರೈಂ
ಮಂಗಳೂರು, ಜ.2: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೇಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆಸಿ ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ.






ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ, ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯವಾಗಿದ್ದು ಅವರನ್ನು ಮತ್ತು ಗುಂಡೇಟು ಪಡೆದ ಆರೋಪಿ ಕಣ್ಣನ್ ಮಣಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೈರಿಂಗ್ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಭದ್ರತಾ ಕಾರ್ಯ ನಡೆಸಿದ್ದಾರೆ. ದರೋಡೆ ಪ್ರಕರಣ ಸಂಬಂಧಿಸಿ ಮುರುಗನ್ ಡಿ ದೇವರ್, ಕಣ್ಣನ್ ಮಣಿ ಮತ್ತು ಯೋಶುವಾ ರಾಜೇಂದ್ರನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಒಬ್ಬನನ್ನು ಮಾತ್ರ ಸ್ಥಳ ಮಹಜರಿಗಾಗಿ ಕರೆದೊಯ್ಯಲಾಗಿತ್ತು. ಇವರನ್ನು ತಮಿಳುನಾಡಿನ ಸ್ಥಳೀಯ ಕೋರ್ಟಿನಲ್ಲಿ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
Kotekar robbery mangalore, accused kanan mani was shot in the leg by police while trying to assault on the police and flee during the spot Mahajar at kotekar bank.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm