ಬ್ರೇಕಿಂಗ್ ನ್ಯೂಸ್
24-01-25 04:28 pm Udupi Correspondent ಕ್ರೈಂ
ಉಡುಪಿ, ಜ.24: ಸಾಲ ತೀರಿಸಿಲ್ಲ ಎಂಬ ಕೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಇನ್ನೊಬ್ಬ ಕಲಾವಿದ ಸೇರಿ ಮೂವರು ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಹಲ್ಲೆ ಮಾಡಿದವರು. ಸಸಿಹಿತ್ಲು ಶ್ರೀ ಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ನಿತಿನ್ ಆಚಾರ್ಯ, ತನ್ನ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ ಬಳಿಯಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು. ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್ನನ್ನು ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜನವರಿ 21ರಂದು ಕಂಬಳದ ಕೋಣಗಳಿಗೆ ಹೊಡೆಯುವ ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನು, ಕಾಲಿಗೆ ಹೊಡೆದು ಕಾಲಿನಿಂದ ತುಳಿದು ಖಾಲಿ ಬಾಂಡ್ ಪೇಪರ್ಗೆ ಬಲಾತ್ಕಾರವಾಗಿ ಸಹಿ ಪಡೆದಿದ್ದಾರೆ. ಬಳಿಕ ಸಂಜೆಯ ವೇಳೆಗೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಬೆನ್ನಿಗೆ ಬಿದ್ದ ಏಟಿನ ಗಾಯದ ನಡುವೆಯೂ ಜನವರಿ 21ರ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ನರ್ತನ ಮಾಡಿದ್ದರು. ಜನವರಿ 22ರಂದು ಬೆಳಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered at the Padubidri police station after a Yakshagana artiste was physically assaulted by three individuals over an alleged failure to repay a loan. The victim, Nithin Kumar from Sasihitlu Mela, is a resident of Padubidri. The accused include Sachin Amin of Udyavara, his father Kushalanna, and another financier.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm