ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
29-04-25 04:28 pm
HK News Desk
Praveen Nettaru, Mohsin Shukur, Karwar Police...
29-04-25 01:04 pm
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 05:45 pm
Mangalore Correspondent
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
29-04-25 02:53 pm
Mangalore Correspondent
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm