ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm