ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm