ಬ್ರೇಕಿಂಗ್ ನ್ಯೂಸ್
24-01-25 10:27 pm Mangalore Correspondent ಕ್ರೈಂ
ಉಳ್ಳಾಲ, ಜ.24 : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕಾಲಕ್ಕಾಡ್ ಗ್ರಾಮದಲ್ಲಿ ದರೋಡೆಗೈದ ಚಿನ್ನವನ್ನು ಬಚ್ಚಿಟ್ಟಿದ್ದ ಷಣ್ಮುಗಂ ಸುಂದರಮ್ (62) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧಿಸಿ ಇತರೇ ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಬೀಡು ಬಿಟ್ಟಿದ್ದಾರೆ. ಮೂವರ ಬಂಧನ ಬಳಿಕ ದರೋಡೆಗೈದ ಚಿನ್ನಾಭರಣದ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಈ ನಡುವೆ, ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಮುರುಗಂಡಿ ದೇವರ್ ಮನೆಯಲ್ಲಿ ಶೋಧ ನಡೆಸಿದ್ದು 16.250 ಕೆ.ಜಿ ಚಿನ್ನವನ್ನ ವಶಕ್ಕೆ ಪಡೆದಿದ್ದಾರೆ. ಷಣ್ಮುಗಂ ಈಗಾಗಲೇ ಬಂಧಿತನಾಗಿರುವ ಮುರುಗಂಡಿ ದೇವರ್ ತಂದೆಯಾಗಿದ್ದು ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನವನ್ನು ಪೊಲೀಸರು ವಶಪಡಿಸಿರುವುದಾಗಿ ತಿಳಿದುಬಂದಿದೆ. ಷಣ್ಮುಗಂ ಸುಂದರಮ್ ದರೋಡೆ ಪ್ರಕರಣದಲ್ಲಿ ನೇರವಾಗಿ ಭಾಗವಹಿಸದೆ ಆರೋಪಿಗಳಿಗೆ ಸಹಕರಿಸಿರುವುದಾಗಿ ಹೇಳಲಾಗಿದೆ.
ಶುಕ್ರವಾರ ಮಧ್ಯಾಹ್ನವೇ ಆರೋಪಿಗಳ ಸ್ಥಳ ಮಹಜರು
ಇದೇ ವೇಳೆ, ಕೋಟೆಕಾರು ಸಹಕಾರಿ ಸಂಘದ ಕೆ.ಸಿ ರೋಡ್ ಶಾಖೆಯ ದರೋಡೆ ಪ್ರಕರಣಕ್ಕೆ ವಾರ ಪೂರೈಕೆಯಾಗಿದ್ದು, ಪ್ರಕರಣದ ರೂವಾರಿಗಳು ತಮಿಳುನಾಡಿನಲ್ಲಿ ಬಂಧಿತರಾಗಿ ಉಳ್ಳಾಲ ಪೊಲೀಸರ ಕಸ್ಟಡಿಯಲ್ಲಿರುವ ಮುರುಗಂಡಿ ದೇವರ್ ಮತ್ತು ಯೋಶುವಾ ರಾಜೇಂದ್ರನ್ ಅವರನ್ನು ಪೊಲೀಸರು ಶುಕ್ರವಾರ ಮಧ್ಯಾಹ್ನದಂದೇ ಬಿಗಿ ಬಂದೋಬಸ್ತಿನಲ್ಲಿ ದರೋಡೆ ನಡೆದಿದ್ದ ಸ್ಥಳಕ್ಕೆ ಕರೆದೊಯ್ದು ಮಹಜರು ಮಾಡಿದ್ದಾರೆ.
ಇಬ್ಬರನ್ನು ಉಳ್ಳಾಲ ಪೊಲೀಸರು ಶುಕ್ರವಾರ ಮಧ್ಯಾಹ್ನ ದರೋಡೆ ನಡೆದಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ ರೋಡ್ ಶಾಖೆ ಮತ್ತು ದರೋಡೆಗೆ ಸ್ಕೆಚ್ ಹಾಕಲಾಗಿದ್ದ ಅಲಂಕಾರ ಗುಡ್ಡೆಯ ಖಾಸಗಿ ಪ್ರದೇಶಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ್ದಾರೆ. ಕಳೆದ ಶುಕ್ರವಾರ ಆರೋಪಿಗಳು ಕೆ.ಸಿ ರೋಡಿನ ಬ್ಯಾಂಕನ್ನ ದರೋಡೆ ಮಾಡಿದ್ದರು. ಕೆ.ಸಿ ರೋಡ್ ಜಂಕ್ಷನಲ್ಲಿ ಬಹುತೇಕ ಮುಸ್ಲಿಮರ ಅಂಗಡಿ, ಮುಂಗಟ್ಟುಗಳೇ ಹೆಚ್ಚಿದ್ದು, ಶುಕ್ರವಾರ ಮಧ್ಯಾಹ್ನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರಿಗಳು ಮಸೀದಿಗೆ ತೆರಳುತ್ತಾರೆ. ಇದೇ ಸಮಯ ಸಂದರ್ಭವನ್ನೇ ಬಳಸಿದ ಆರೋಪಿಗಳು ಬ್ಯಾಂಕನ್ನ ದರೋಡೆಗೈದಿದ್ದರು.
ಆರೋಪಿಗಳನ್ನ ಸ್ಥಳ ಮಹಜರಿಗೆ ಕರೆತರುವ ವೇಳೆ ಸ್ಥಳೀಯರು ದಾಳಿ ನಡೆಸಬಾರದೆನ್ನುವ ಮುಂಜಾಗ್ರತೆಯಿಂದ ಪೊಲೀಸರು ಬಂಧಿತರನ್ನ ಶುಕ್ರವಾರ ಮಧ್ಯಾಹ್ನವೇ ದರೋಡೆ ನಡೆದ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿಗಳಿಗೆ ಫೆ.3ರ ತನಕ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
Mangalore Kotekar bank robbery, another accused arrested, the arrested has been identified as Shanmugam Sundaram. Also 16 kilo gold has been recovered from murgan devar house in Tirunelveli by mangalore police.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm