ಬ್ರೇಕಿಂಗ್ ನ್ಯೂಸ್
26-01-25 05:07 pm HK News Desk ಕ್ರೈಂ
ಕಾರವಾರ, ಜ 26: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
2022ರಲ್ಲಿ ಅಂಕೋಲಾ ತಾಲೂಕಿನ 29 ವರ್ಷದ ವಿವಾಹಿತ ವ್ಯಕ್ತಿ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ತನ್ನ ತಾಯಿ ಕರೆದಿರುವುದಾಗಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಂದು ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ಆರೋಪಿಸಿ ಬಾಲಕಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಂದಿನ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ ಅವರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಬಳಿಕ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠದ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 1 ವರ್ಷ ಜೈಲು ಶಿಕ್ಷೆಯ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ವಾದಿಸಿದ್ದರು.
ಅಂದಿನ ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಸಂತೋಷ್ ಶೆಟ್ಟಿ, ಪ್ರಕರಣದ ಮೇಲುಸ್ತುವಾರಿ ಅಧಿಕಾರಿ ಈಗಿನ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಮಠಪತಿ, ಎಎಸ್ಐ ಮಹಾಬಲೇಶ್ವರ ಗಡೇರ, ಸಹಾಯಕ ಗುರುರಾಜ ನಾಯ್ಕ ಪ್ರಕರಣದ ಸಾಕ್ಷಿಯಾಗಿ ಸಹಕರಿಸಿದ್ದರು.
Accused gets 20 years imprisonment for rape and cheating of marriage by Karwar court.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm