ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.

ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm