ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.


ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm