ಬ್ರೇಕಿಂಗ್ ನ್ಯೂಸ್
29-01-25 04:12 pm Mangalore Correspondent ಕ್ರೈಂ
ಕಾರವಾರ, ಜ.29: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿರುವ ಕಾರಿನಲ್ಲಿ 1.15 ಕೋಟಿ ರೂಪಾಯಿ ನಗದು ಪತ್ತೆಯಾದ ಪ್ರಸಂಗ ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ರಾಮನಗುಳಿ ಬಳಿ ನಡೆದಿದೆ. ಪೊಲೀಸರು ಕಾರನ್ನು ವಶಕ್ಕೆ ಪಡೆದು ಅಂಕೋಲಾ ಠಾಣೆಯಲ್ಲಿ ತಂದಿರಿಸಿದ್ದಾರೆ.
ಸೋಮವಾರ ಸಂಜೆಯಿಂದ ಅಪರಿಚಿತರು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ಹೋಗಿದ್ದರು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ ಕಾರನ್ನು ಪರಿಶೀಲನೆ ಮಾಡಿದ್ದಾರೆ. ಕಾರಿನ ಬಾಗಿಲು ಓಪನ್ ಆದ ರೀತಿಯಲ್ಲಿದ್ದು ಸೀಟು ಕಿತ್ತುಕೊಂಡು ಬಂದಂತಿತ್ತು. ಅದರಲ್ಲಿದ್ದ ಬಾಕ್ಸ್ ಪರಿಶೀಲಿಸಿದಾಗ 1.15 ಕೋಟಿ ನಗದು ಇರುವುದು ಕಂಡುಬಂದಿದೆ.


ಕಾರಿನ ನಂಬರ್ ಪ್ಲೇಟ್ ಬೇರೆ ಇತ್ತು. ಒಳಗಡೆ ನಕಲಿ ನಂಬರ್ ಪ್ಲೇಟ್ ಗಳು ಪತ್ತೆಯಾಗಿದೆ. ಸದ್ರಿ ಕಾರಿನ ನಂಬರ್ ಕೆಎ19 ಎಂಪಿ 1036 ನೋಂದಣಿ ಸಂಖ್ಯೆಯದ್ದು ಮತ್ತು ಮಂಗಳೂರು ನಿವಾಸಿ ರಾಜೇಶ್ ಪವಾರ್ ಹೆಸರಿನ ವ್ಯಕ್ತಿಗೆ ಸೇರಿದ್ದು ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ಅಕ್ರಮ ವ್ಯವಹಾರಗಳಿಗೆ ಬಳಸುತ್ತಿದ್ದ ಬಗ್ಗೆ ಅನುಮಾನಗಳಿದ್ದು ಕಾರಿನ ಮಾಲೀಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಕಾರು ಹಾಗೂ ಅದರಲ್ಲಿದ್ದ ಹಣ ಯಾರಿಗೆ ಸೇರಿದ್ದು, ನಿರ್ಜನ ಪ್ರದೇಶದಲ್ಲಿ ಕಾರನ್ನು ತಂದು ನಿಲ್ಲಿಸಿದ್ದು ಏಕೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Rs One Crore Found In Mangalore based Abandoned Car In Deserted Area in Ankola. The police have found that the car belongs to the owner from Mangalore Rajesh Pavar. t has been learnt that the car was seen parked in a deserted area without occupants since Monday evening. Suspicious locals informed the police, after which, a highway patrol team rushed to the spot and inspected the car on Tuesday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am