ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm