ಬ್ರೇಕಿಂಗ್ ನ್ಯೂಸ್
05-02-25 04:29 pm Bangalore Correspondent ಕ್ರೈಂ
ಬೆಂಗಳೂರು, ಫೆ.5: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕು ಇರಿದು ಪತಿಯೇ ಅಮಾನುಷವಾಗಿ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಮಗುವನ್ನ ಶಾಲೆಗೆ ಬಿಡಲು ಬಂದಿದ್ದ ಪತ್ನಿಯ ಮೇಲೆ ಪತಿ ಅಟ್ಯಾಕ್ ಮಾಡಿದ್ದು ಏಳೆಂಟು ಬಾರಿ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡು ನೆಲದಲ್ಲಿ ಕುಸಿದು ಬಿದ್ದ ಮಹಿಳೆ ಶ್ರೀಗಂಗಾ(29) ಸಾವನ್ನಪ್ಪಿದ್ದಾಳೆ. ಮೋಹನ್ ರಾಜು(32) ಪತ್ನಿಯನ್ನ ಕೊಲೆಗೈದ ದುರುಳ ವ್ಯಕ್ತಿ.
ಇವರು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು ಮದುವೆಯಾಗಿ ಏಳು ವರ್ಷಗಳಾಗಿದ್ದವು. ಇವರಿಗೆ ಆರು ವರ್ಷದ ಮಗನಿದ್ದು ಘಟನೆ ಸಂದರ್ಭದಲ್ಲಿ ಶಾಲೆಗೆ ಹೋಗಿದ್ದ. ಪತಿ ಮೋಹನ್ ರಾಜ್ ತನ್ನ ಸ್ನೇಹಿತನ ಜೊತೆಗೆ ಪತ್ನಿ ಗಂಗಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕೆಯಲ್ಲಿ ಎರಡು- ಮೂರು ವರ್ಷದಿಂದ ಗಲಾಟೆ ಮಾಡುತ್ತಿದ್ದ. ಗಲಾಟೆಯಿಂದಾಗಿ ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿಯೇ ನೆಲೆಸಿದ್ದರು.
ನಿನ್ನೆ ರಾತ್ರಿ ಮಗುವನ್ನ ನೋಡಲು ಪತಿ ಮೋಹನ್ ರಾಜ್ ಪತ್ನಿಯಿದ್ದ ಮನೆಗೆ ಬಂದಿದ್ದ. ಆದರೆ ಆಗಲೂ ಮತ್ತೆ ಪತಿ - ಪತ್ನಿ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾಗಿದ್ದ ಮೋಹನ್ ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ಸ್ಕೂಟರ್ ನಲ್ಲಿ ಬಂದಿದ್ದ ಶ್ರೀಗಂಗಾಳನ್ನು ಕೊಲ್ಲಲೆಂದೇ ಕಾದು ಕುಳಿತಿದ್ದು ಚೂರಿಯಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ಒಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಶ್ರೀಗಂಗಾ ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಆರೋಪಿ ಮೋಹನ್ ರಾಜ್ ನನ್ನು ಬಂಧಿಸಿದ್ದಾರೆ.
Bangalore 29 year old wife brutally murdered by husband over illicit affair. The deceased has been identified as Shriganga, and Mohan raju is the accused husband.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am