ಬ್ರೇಕಿಂಗ್ ನ್ಯೂಸ್
05-02-25 04:29 pm Bangalore Correspondent ಕ್ರೈಂ
ಬೆಂಗಳೂರು, ಫೆ.5: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕು ಇರಿದು ಪತಿಯೇ ಅಮಾನುಷವಾಗಿ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಮಗುವನ್ನ ಶಾಲೆಗೆ ಬಿಡಲು ಬಂದಿದ್ದ ಪತ್ನಿಯ ಮೇಲೆ ಪತಿ ಅಟ್ಯಾಕ್ ಮಾಡಿದ್ದು ಏಳೆಂಟು ಬಾರಿ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡು ನೆಲದಲ್ಲಿ ಕುಸಿದು ಬಿದ್ದ ಮಹಿಳೆ ಶ್ರೀಗಂಗಾ(29) ಸಾವನ್ನಪ್ಪಿದ್ದಾಳೆ. ಮೋಹನ್ ರಾಜು(32) ಪತ್ನಿಯನ್ನ ಕೊಲೆಗೈದ ದುರುಳ ವ್ಯಕ್ತಿ.
ಇವರು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು ಮದುವೆಯಾಗಿ ಏಳು ವರ್ಷಗಳಾಗಿದ್ದವು. ಇವರಿಗೆ ಆರು ವರ್ಷದ ಮಗನಿದ್ದು ಘಟನೆ ಸಂದರ್ಭದಲ್ಲಿ ಶಾಲೆಗೆ ಹೋಗಿದ್ದ. ಪತಿ ಮೋಹನ್ ರಾಜ್ ತನ್ನ ಸ್ನೇಹಿತನ ಜೊತೆಗೆ ಪತ್ನಿ ಗಂಗಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕೆಯಲ್ಲಿ ಎರಡು- ಮೂರು ವರ್ಷದಿಂದ ಗಲಾಟೆ ಮಾಡುತ್ತಿದ್ದ. ಗಲಾಟೆಯಿಂದಾಗಿ ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿಯೇ ನೆಲೆಸಿದ್ದರು.
ನಿನ್ನೆ ರಾತ್ರಿ ಮಗುವನ್ನ ನೋಡಲು ಪತಿ ಮೋಹನ್ ರಾಜ್ ಪತ್ನಿಯಿದ್ದ ಮನೆಗೆ ಬಂದಿದ್ದ. ಆದರೆ ಆಗಲೂ ಮತ್ತೆ ಪತಿ - ಪತ್ನಿ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾಗಿದ್ದ ಮೋಹನ್ ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ಸ್ಕೂಟರ್ ನಲ್ಲಿ ಬಂದಿದ್ದ ಶ್ರೀಗಂಗಾಳನ್ನು ಕೊಲ್ಲಲೆಂದೇ ಕಾದು ಕುಳಿತಿದ್ದು ಚೂರಿಯಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ಒಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಶ್ರೀಗಂಗಾ ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಆರೋಪಿ ಮೋಹನ್ ರಾಜ್ ನನ್ನು ಬಂಧಿಸಿದ್ದಾರೆ.
Bangalore 29 year old wife brutally murdered by husband over illicit affair. The deceased has been identified as Shriganga, and Mohan raju is the accused husband.
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm