ಬ್ರೇಕಿಂಗ್ ನ್ಯೂಸ್
09-02-25 07:35 pm Mangalore Correspondent ಕ್ರೈಂ
ಮಂಗಳೂರು, ಫೆ.9: ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ ಅಪರಾಧಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿದ ಆರೋಪ ಹೊತ್ತಿದ್ದ ಮಂಗಳೂರು ಹೊರವಲಯದ ತಲಪಾಡಿಯ ವ್ಯಕ್ತಿಯೊಬ್ಬರ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಮಾಡಿದೆ.
ತಲಪಾಡಿ ಗ್ರಾಮದ ಉದಯ ಕುಮಾರ್ ಶೆಟ್ಟಿ ಎಂಬವರು ತಮ್ಮ ಮೇಲಿನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಐಪಿಸಿ ಸೆಕ್ಷನ್ 216 (ಅಪರಾಧಿಗೆ ಉದ್ದೇಶಪೂರ್ವಕವಾಗಿ ಆಶ್ರಯ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾದಲ್ಲಿ ಆರೋಪಿಗೆ ಕೋರ್ಟಿನಲ್ಲಿ ಪ್ರಕರಣ ಸಾಬೀತಾದ ಅಪರಾಧಿಯ ಶಿಕ್ಷೆಯ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು, ಜತೆಗೆ ಉದ್ದೇಶಪೂರ್ವಕ ಆಶ್ರಯ ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸುವಂತಹ ಅಂಶಗಳು ಬೇಕಾಗುತ್ತವೆ ಎಂದು ಆದೇಶದಲ್ಲಿ ತಿಳಿಸಿದೆ.
ಅಪರಾಧಿಯನ್ನು ಅರ್ಜಿದಾರರ ಮನೆಯಲ್ಲಿಯೇ ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ ಅರ್ಜಿದಾರರಿಗೆ ಅಪರಾಧಿಯ ಶಿಕ್ಷೆಯ ಬಗ್ಗೆ ತಿಳಿದಿತ್ತು ಮತ್ತು ಅವರು ಉದ್ದೇಶಪೂರ್ವಕವಾಗಿ ಅಪರಾಧಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಪ್ರಕರಣ ರದ್ದುಪಡಿಸಲಾಗಿದೆ. ಜೊತೆಗೆ, ಸಾಕ್ಷ್ಯಾಧಾರಗಳಿಲ್ಲದೆ ಅರ್ಜಿದಾರರ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಕೊಲೆ ಅಪರಾಧಿಗೆ ಆಶ್ರಯ ನೀಡಿದ್ದಕ್ಕೆ ಕೇಸು
ಮಂಗಳೂರಿನ ಬರ್ಕೆ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣ ಒಂದರಲ್ಲಿ ಶರಣ್ ಪೂಜಾರಿ ಎಂಬಾತನಿಗೆ ಮಂಗಳೂರಿನ 5ನೇ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆರೋಪಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರಿಂದ ಬಂಧಿಸಲು ಹುಡುಕಾಟ ನಡೆಸಿದ್ದರು. ಈ ವೇಳೆ, ತಲಪಾಡಿಯ ಉದಯ ಕುಮಾರ್ ಶೆಟ್ಟಿ ಮನೆಯಲ್ಲಿ ಬಂಧಿಸಲಾಗಿತ್ತು. ಈ ಬಗ್ಗೆ ಪೊಲೀಸರು ಉದಯ ಶೆಟ್ಟಿ ವಿರುದ್ಧವೂ ಕೊಲೆ ಅಪರಾಧಿಗೆ ಆಶ್ರಯ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಉದಯ ಶೆಟ್ಟಿ ವಕೀಲರ ಮೂಲಕ ಹೈಕೋರ್ಟಿನಲ್ಲಿ ದಾವೆ ಹೂಡಿದ್ದರು.
Mangalore Accused Uday Kumar from talapady arrested for giving shelter to murder accused gets stay in high court.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm