ಬ್ರೇಕಿಂಗ್ ನ್ಯೂಸ್
13-02-25 10:20 pm Mangalore Correspondent ಕ್ರೈಂ
ಮಂಗಳೂರು, ಫೆ.13: ಕೇರಳದಲ್ಲಿ ಅತಿ ಕ್ರೂರ ರೀತಿಯ ರ್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಕಿರಿಯ ವಿದ್ಯಾರ್ಥಿಗಳನ್ನು ಬೆತ್ತಲೆಯಾಗಿ ನಿಲ್ಲಿಸಿ ಅವರ ಶಿಶ್ನಕ್ಕೆ ಜಿಮ್ ನಲ್ಲಿ ಬಳಸುವ ಭಾರದ ಡಂಬೆಲ್ಸ್ ಕಟ್ಟಿ ತೂಗು ಹಾಕಿದ್ದಲ್ಲದೆ, ಕಂಪಾಸ್ ಬಾಕ್ಸ್ ನಲ್ಲಿರುವ ಜಾಮೆಟ್ರಿ ಉಪಕರಣಗಳಿಂದ ದೇಹಕ್ಕೆ ಚುಚ್ಚಿ ಚಿತ್ರಹಿಂಸೆ ನೀಡಿರುವ ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಐವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಕೊಟ್ಟಾಯಂ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಮೂವರು ಮೊದಲ ವರ್ಷದ ವಿದ್ಯಾರ್ಥಿಗಳು ತಮಗಾದ ಕಿರುಕುಳದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. 2024ರ ನವೆಂಬರ್ ತಿಂಗಳಿನಿಂದ ಕಿರುಕುಳ ಶುರುವಾಗಿದ್ದು, ಮೂರು ತಿಂಗಳ ವರೆಗೂ ನಿರಂತರವಾಗಿ ಚಿತ್ರಹಿಂಸೆ ಕೊಟ್ಟಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಹಿರಿಯ ವಿದ್ಯಾರ್ಥಿಗಳ ಮುಂದುಗಡೆ ಉದ್ದಕ್ಕೆ ಬೆತ್ತಲೆಯಾಗಿ ನಿಲ್ಲಿಸಿದ್ದಲ್ಲದೆ, ಶಿಶ್ನಕ್ಕೆ ಡಂಬಲ್ಸ್ ಅನ್ನು ಕಟ್ಟಿ ತೂಗು ಹಾಕಲಾಗಿತ್ತು. ಇದಲ್ಲದೆ, ಕಂಪಾಸ್ ಬಾಕ್ಸ್ ನಲ್ಲಿರುವ ಜಾಮೆಟ್ರಿ ಉಪಕರಣಗಳಿಂದ ದೇಹಕ್ಕೆ ಅಲ್ಲಲ್ಲಿ ಚುಚ್ಚಿ ಗಾಯಗೊಳಿಸಿದ್ದಾರೆ. ಆನಂತರ, ಗಾಯಕ್ಕೆ ಉರಿ ಬರುವ ರೀತಿಯ ಮುಲಾಮು ಹಚ್ಚಿ ನೋವಾಗುವಂತೆ ಮಾಡಿದ್ದಾರೆ. ನೋವಿನಿಂದ ಚೀರಾಡಿದಾಗ ಅದನ್ನು ತಮ್ಮದೇ ಬಾಯಿಯಲ್ಲಿ ನೆಕ್ಕಿಸುವ ಮೂಲಕ ಮುಲಾಮನ್ನು ತೆಗೆಸಿದ್ದಾರೆ. ಇದೆಲ್ಲವನ್ನೂ ಹಿರಿಯ ವಿದ್ಯಾರ್ಥಿಗಳು ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದು, ಈ ಬಗ್ಗೆ ಯಾರಿಗಾದರೂ ದೂರು ಕೊಟ್ಟರೆ ಭವಿಷ್ಯ ಹಾಳು ಮಾಡುತ್ತೇವೆ, ವಿಡಿಯೋ ಹೊರಗಡೆ ಬಿಡುತ್ತೇವೆ ಎಂದು ಬೆದರಿಸಿದ್ದಾರೆ.
ಇದಲ್ಲದೆ, ಪ್ರತಿ ಭಾನುವಾರವೂ ಮದ್ಯ ಖರೀದಿಗೆಂದು ಹಣ ಕೇಳುತ್ತಿದ್ದರು. ಹಣ ಕೊಡದೇ ಇದ್ದರೆ ಹಲ್ಲೆ ಮಾಡುತ್ತಿದ್ದರು. ಇದರಿಂದ ರೋಸಿಹೋದ ಒಬ್ಬಾತ ತನ್ನ ಮನೆಯಲ್ಲಿ ತಂದೆಗೆ ಹೇಳಿದ್ದು ಅವರು ಧೈರ್ಯ ಮಾಡಿಸಿ ಪೊಲೀಸರಿಗೆ ದೂರು ನೀಡುವಂತೆ ಮಾಡಿದ್ದಾರೆ. ಇದರಿಂದಾಗಿ ತಡವಾಗಿಯಾದರೂ ಪ್ರಕರಣ ಬೆಳಕಿಗೆ ಬರುವಂತಾಗಿದೆ. ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಕಳೆದ ಜನವರಿ ತಿಂಗಳಲ್ಲಿ ಕೊಚ್ಚಿಯಲ್ಲಿ 15 ವರ್ಷದ ಬಾಲಕನೊಬ್ಬ ಇದೇ ರೀತಿ ತೀವ್ರ ರ್ಯಾಗಿಂಗ್ ಒಳಗಾಗಿ ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೇ ಕೊಟ್ಟಾಯಂನಲ್ಲಿ ಚಿತ್ರಹಿಂಸೆ ಕೃತ್ಯ ಬೆಳಕಿಗೆ ಬಂದಿದೆ.
Stripped naked, dumbbells hung from private parts, stabbed with geometry box compasses and beaten bloody for three months - a fresh ragging incident has rocked a government college in Kerala where five third-year nursing students have been arrested for allegedly subjecting their juniors to months of brutal physical and mental abuse.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm