ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm