ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm