ಬ್ರೇಕಿಂಗ್ ನ್ಯೂಸ್
18-02-25 07:19 pm Mangalore Correspondent ಕ್ರೈಂ
ಮಂಗಳೂರು, ಫೆ.18: ಮೀನಿನ ಟೆಂಪೋದಲ್ಲಿ ಮೀನಿನ ಬದಲಾಗಿ ಟ್ರೇನಲ್ಲಿ ಕೇಜಿಗಟ್ಟಲೆ ಗಾಂಜಾವನ್ನು ತುಂಬಿಸಿಕೊಂಡು ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರು ಹಾಗೂ ಕೇರಳದ ಕಾಸರಗೋಡು ಜಿಲ್ಲೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಮಂಗಳೂರಿನ ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು, 119 ಕೇಜಿ ಗಾಂಜಾ, 407 ಟೆಂಪೋ ಮತ್ತು ಮಾರುತಿ ಆಲ್ಟೋ ಕಾರು ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಫೆ.17ರಂದು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕಿನ ಕೊಣಾಜೆ ಠಾಣೆ ವ್ಯಾಪ್ತಿಯ ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೀನಿನ ಟೆಂಪೋದಲ್ಲಿ ಪರಿಶೀಲನೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಜೊತೆಗೆ, ಈ ವಾಹನಕ್ಕೆ ಎಸ್ಕಾರ್ಟ್ ಆಗಿ ಮಾರುತಿ ಆಲ್ಟೋ ಕಾರು ಬರುತ್ತಿರುವುದನ್ನು ಗಮನಿಸಿ ಅದನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮೊಯ್ದೀನ್ ಶಬೀರ್ (38), ಥಾಣೆ ಡೊಂಬಿವಿಲಿ ನಿವಾಸಿ, ವಿಜಯವಾಡದಲ್ಲಿ ನೆಲೆಸಿದ್ದ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳದ ಆಲಪ್ಪುಯ ಜಿಲ್ಲೆಯ ಚೇರ್ತಲಾ ನಿವಾಸಿ ಅಜಯ್ ಕೃಷ್ಣ(33), ಹರಿಯಾಣದ ಜಿಂದ್ ಜಿಲ್ಲೆಯ ನರ್ವಾನ ನಿವಾಸಿ ಜೀವನ್ ಸಿಂಗ್(35) ಬಂಧಿತರೆಂದು ಗುರುತಿಸಲಾಗಿದೆ. ಗಾಂಜಾ ಸಾಗಾಟಕ್ಕೆ ಬಳಸಿದ ಮೀನು ಸಾಗಾಟದ KL-01-BF-9310 (Tata 407- Insulator Vehicle) ಹಾಗೂ AP-31-BP-3575 ಮಾರುತಿ ಆಲ್ಟೋ ಕಾರನ್ನು ಹಾಗೂ ರೂ. 35 ಮೌಲ್ಯದ ನಿಷೇಧಿತ ಮಾದಕ ವಸ್ತು 119 ಕೆಜಿ ಗಾಂಜಾವನ್ನು ಸ್ವಾಧೀನಪಡಿಸಲಾಗಿದೆ.
ಐದು ಮೊಬೈಲ್ ಫೋನ್, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನ ಕ್ರೆಟ್ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಲಾಗಿದೆ. ಆರೋಪಿಗಳು ಆಂಧ್ರ ಪ್ರದೇಶದಿಂದ ಬೆಂಗಳೂರು -ಮಂಗಳೂರು ಮೂಲಕ ಕೇರಳ ರಾಜ್ಯದ ಕಾಸರಗೋಡಿಗೆ ಗಾಂಜಾ ಸಾಗಾಟ ಮಾಡುತ್ತಿದ್ದರು. ಆರೋಪಿಗಳಿಂದ ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ 51 ಲಕ್ಷ ರೂ. ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪೈಕಿ ಮೊಯಿದ್ದೀನ್ ಶಬ್ಬೀರ್ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಕುಂಬ್ಳೆ, ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ದನ ಕಳ್ಳತನ, ಹಲ್ಲೆ, ಕೊಲೆ ಹೀಗೆ ಒಟ್ಟು 12 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ, ಆಂಧ್ರ ಪ್ರದೇಶದಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುತ್ತದೆ. 2023ನೇ ಇಸವಿಯಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರ ತಂಡ ದಸ್ತಗಿರಿ ಮಾಡಿ ಆತನ ವಶದಿಂದ 23.250 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಸುಮಾರು ಒಂದೂವರೆ ವರ್ಷ ಜೈಲಿನಲ್ಲಿದ್ದು ಸುಮಾರು 6 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡವನು ಪುನಃ ಅದೇ ಗಾಂಜಾ ಸಾಗಾಟ ಕೃತ್ಯದಲ್ಲಿ ಭಾಗಿಯಾಗಿದ್ದಾನೆ.
ಇನ್ನೋರ್ವ ಆರೋಪಿ ಮಹೇಶ್ ದ್ವಾರಿಕನಾಥ ಪಾಂಡೆ ಎಂಬಾತನ ವಿರುದ್ಧ ಆಂಧ್ರ ಪ್ರದೇಶದ ರಾಜಮಂಡ್ರಿ ಎಂಬಲ್ಲಿ ಎರಡು ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ. ಅಜಯ್ ಕೃಷ್ಣನ್ ಎಂಬಾತನ ವಿರುದ್ಧ ಆಲಪ್ಪುಳ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಹಲ್ಲೆ, ಗಾಂಜಾ ಮಾರಾಟ ಹಾಗೂ ನಕಲಿ ಚಿನ್ನವನ್ನು ಬ್ಯಾಂಕ್ ನಲ್ಲಿ ಅಡವಿರಿಸಿ ವಂಚನೆ ಮಾಡಿರುವ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿ ಜೀವನ್ ಸಿಂಗ್ ವಿರುದ್ಧ ಆಂಧ್ರಪ್ರದೇಶದ ಮೊತುಕುಡಮ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐಗಳಾದ ಶರಣಪ್ಪ ಭಂಡಾರಿ, ಸುದೀಪ್ ಹಾಗೂ ಮೋಹನ್ ಕೆ.ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The Mangaluru CCB police arrested four individuals for possessing 119 kg of ganja. The arrested individuals have been identified as Mohiudeen Shabbir (38) from Kasaragod, Mahesh Dwarakanath Pandey (30) from Thane, Maharashtra, Ajay Krishnan (30) from Kerala, and Jeevan Singh (35) from Haryana.
28-04-25 10:15 pm
HK News Desk
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
Ex- ISRO chief, K Kasturirangan: ಎನ್ಇಪಿ ಶಿಕ್ಷ...
25-04-25 07:32 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
28-04-25 11:41 am
Mangalore Correspondent
Mangalore, Terror Attack, Doctor Post: ಹೈಲ್ಯಾ...
27-04-25 11:09 pm
Murali krishna, puttur, FIR: ಪೆಟ್ರೋಲ್ ಪಂಪ್ ವ್...
27-04-25 06:25 pm
Vhp, Mangalore, Railway Exam, Janivara: ರೈಲ್ವ...
27-04-25 05:28 pm
Harish Poonja, U T Khader, Mangalore: ಹರೀಶ್ ಪ...
27-04-25 01:00 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm