ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am