ಬ್ರೇಕಿಂಗ್ ನ್ಯೂಸ್
23-02-25 03:42 pm HK News Desk ಕ್ರೈಂ
ಶಿರಸಿ, ಫೆ.23 : ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿ ಬೇರೆ ಯುವಕನನ್ನು ಮದುವೆಯಾದ ಸಿಟ್ಟಿಗೆ ಆಕೆಯ ಗಂಡನನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿರಸಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಶಿರಸಿಯಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಗಂಗಾಧರ್ ಹತ್ಯೆಯಾದ ಯುವಕ. ಶಿರಸಿ ನಗರದ ಸ್ಥಳೀಯ ನಿವಾಸಿ ಪ್ರೀತಮ್ ಡಿಸೋಜ ಕೊಲೆಗೈದ ವ್ಯಕ್ತಿ. ಘಟನೆ ಬಳಿಕ ಪ್ರೀತಮ್ ಡಿಸೋಜಾ ಸ್ಥಳದಿಂದ ಪರಾರಿಯಾಗಿದ್ದರೂ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.




ಶಿರಸಿಯ ಯುವತಿ ಮತ್ತು ಪ್ರೀತಮ್ ಡಿಸೋಜ ಹತ್ತು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ. ಆದರೆ ಕೆಲಸಕ್ಕಾಗಿ ವರ್ಷದ ಹಿಂದೆ ಬೆಂಗಳೂರಿಗೆ ಹೋದ ಯುವತಿಗೆ, ಅಲ್ಲಿ ಸಾಗರದ ಯುವಕ ಗಂಗಾಧರ್ ಪರಿಚಯವಾಗಿದ್ದು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಫೆ.22ರ ಶನಿವಾರ ಗಂಗಾಧರ್, ಪತ್ನಿಯ ಸಂಬಂಧಿಕರ ಕಾರ್ಯಕ್ರಮಕ್ಕೆಂದು ಪತ್ನಿಯೊಂದಿಗೆ ಶಿರಸಿಗೆ ಬಂದಿದ್ದ. ಶನಿವಾರ ರಾತ್ರಿ ಬೆಂಗಳೂರಿಗೆ ಹಿಂತಿರುಗಲು ಶಿರಸಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಬಸ್ಸಿನಲ್ಲಿ ಕುಳಿತಿದ್ದರು. ಈ ವೇಳೆ ಪ್ರೀತಮ್ ಕೂಡ ಅದೇ ಬಸ್ಸಿಗೆ ಹತ್ತಿದ್ದು, ಏಕಾಏಕಿ ಗಂಗಾಧರ್ ಜೊತೆಗೆ ಜಗಳಕ್ಕಿಳಿದಿದ್ದಾನೆ. ಇದೇ ವೇಳೆ, ಪ್ರೀತಮ್ ಕೈಯಲ್ಲಿದ್ದ ಚೂರಿ ತೆಗೆದು, ಗಂಗಾಧರ್ನ ಎದೆಯ ಭಾಗಕ್ಕೆ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡ ಗಂಗಾಧರ್ ಆಸ್ಪತ್ರೆ ಒಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಶಿರಸಿ ಡಿಎಸ್ಪಿ ಕೆ.ಎಲ್.ಗಣೇಶ, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ನಾಗಪ್ಪ ಬಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In an incident near the KSRTC bus stand in Sirsi, Uttara Kannada district, a man was stabbed to death aboard a bus full of scared passengers which was bound for Bengaluru The victim, Gangadhar from Neechadi in Sagar taluk, was travelling with his wife, Pooja, when it happened. Pooja had previously been in a decade-long relationship with Pritam D'Souza, the accused, before marrying Gangadhar four months ago after relocating to Bengalore for work.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm