ಬ್ರೇಕಿಂಗ್ ನ್ಯೂಸ್
23-02-25 03:42 pm HK News Desk ಕ್ರೈಂ
ಶಿರಸಿ, ಫೆ.23 : ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿ ಬೇರೆ ಯುವಕನನ್ನು ಮದುವೆಯಾದ ಸಿಟ್ಟಿಗೆ ಆಕೆಯ ಗಂಡನನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿರಸಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಶಿರಸಿಯಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಗಂಗಾಧರ್ ಹತ್ಯೆಯಾದ ಯುವಕ. ಶಿರಸಿ ನಗರದ ಸ್ಥಳೀಯ ನಿವಾಸಿ ಪ್ರೀತಮ್ ಡಿಸೋಜ ಕೊಲೆಗೈದ ವ್ಯಕ್ತಿ. ಘಟನೆ ಬಳಿಕ ಪ್ರೀತಮ್ ಡಿಸೋಜಾ ಸ್ಥಳದಿಂದ ಪರಾರಿಯಾಗಿದ್ದರೂ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.




ಶಿರಸಿಯ ಯುವತಿ ಮತ್ತು ಪ್ರೀತಮ್ ಡಿಸೋಜ ಹತ್ತು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ. ಆದರೆ ಕೆಲಸಕ್ಕಾಗಿ ವರ್ಷದ ಹಿಂದೆ ಬೆಂಗಳೂರಿಗೆ ಹೋದ ಯುವತಿಗೆ, ಅಲ್ಲಿ ಸಾಗರದ ಯುವಕ ಗಂಗಾಧರ್ ಪರಿಚಯವಾಗಿದ್ದು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಫೆ.22ರ ಶನಿವಾರ ಗಂಗಾಧರ್, ಪತ್ನಿಯ ಸಂಬಂಧಿಕರ ಕಾರ್ಯಕ್ರಮಕ್ಕೆಂದು ಪತ್ನಿಯೊಂದಿಗೆ ಶಿರಸಿಗೆ ಬಂದಿದ್ದ. ಶನಿವಾರ ರಾತ್ರಿ ಬೆಂಗಳೂರಿಗೆ ಹಿಂತಿರುಗಲು ಶಿರಸಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಬಸ್ಸಿನಲ್ಲಿ ಕುಳಿತಿದ್ದರು. ಈ ವೇಳೆ ಪ್ರೀತಮ್ ಕೂಡ ಅದೇ ಬಸ್ಸಿಗೆ ಹತ್ತಿದ್ದು, ಏಕಾಏಕಿ ಗಂಗಾಧರ್ ಜೊತೆಗೆ ಜಗಳಕ್ಕಿಳಿದಿದ್ದಾನೆ. ಇದೇ ವೇಳೆ, ಪ್ರೀತಮ್ ಕೈಯಲ್ಲಿದ್ದ ಚೂರಿ ತೆಗೆದು, ಗಂಗಾಧರ್ನ ಎದೆಯ ಭಾಗಕ್ಕೆ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡ ಗಂಗಾಧರ್ ಆಸ್ಪತ್ರೆ ಒಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಶಿರಸಿ ಡಿಎಸ್ಪಿ ಕೆ.ಎಲ್.ಗಣೇಶ, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ನಾಗಪ್ಪ ಬಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In an incident near the KSRTC bus stand in Sirsi, Uttara Kannada district, a man was stabbed to death aboard a bus full of scared passengers which was bound for Bengaluru The victim, Gangadhar from Neechadi in Sagar taluk, was travelling with his wife, Pooja, when it happened. Pooja had previously been in a decade-long relationship with Pritam D'Souza, the accused, before marrying Gangadhar four months ago after relocating to Bengalore for work.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm