ಬ್ರೇಕಿಂಗ್ ನ್ಯೂಸ್
24-02-25 07:08 pm Bangalore Correspondent ಕ್ರೈಂ
ಬೆಂಗಳೂರು, ಫೆ.24 : ದೂರು ನೀಡಲು ಠಾಣೆಗೆ ಬಂದಿದ್ದ ಅಪ್ರಾಪ್ತ ಆತ್ಯಾಚಾರ ಸಂತ್ರಸ್ತೆಯನ್ನು ಸಹಾಯ ಮಾಡುವ ನೆಪದಲ್ಲಿ ಪುಸಲಾಯಿಸಿ ಪೊಲೀಸ್ ಪೇದೆಯೇ ಮತ್ತೆ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧಿಸಿ ಪೊಲೀಸ್ ಕಾನ್ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನ ವಿರುದ್ಧ ಮೈಕೋ ಲೇಔಟ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. 17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ, ವಿವಾಹಿತ ವ್ಯಕ್ತಿಯೊಬ್ಬ ಪರಿಚಯವಾಗಿದ್ದು ಪ್ರೀತಿಯ ನಾಟಕವಾಡಿದ್ದ. ಪ್ರೀತಿಸಿ ಮದುವೆ ಮಾಡಿಕೊಳ್ಳೋದಾಗಿ ನಂಬಿಸಿ, ಬಾಲಕಿ ಮೇಲೆ ನಿರಂತರ ಆತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ನೊಂದ ಅಪ್ರಾಪ್ತ ಬಾಲಕಿ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು.
ಈ ಬಗ್ಗೆ ದೂರು ನೀಡಲು ಹೋಗಿದ್ದ ಸಂತ್ರಸ್ತೆಯನ್ನು ಅದೇ ಠಾಣೆಯ ಕಾನ್ಸ್ಟೇಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯ ಕೊಡಿಸುವುದಾಗಿ ಹೇಳಿ ನಂಬಿಕೆ ಹುಟ್ಟಿಸಿದ್ದ. ಅಲ್ಲದೆ, ಕೆಲಸ ಕೊಡಿಸುವುದಾಗಿ ನಂಬಿಸಿ ಕಳೆದ ಡಿಸೆಂಬರ್ ನಲ್ಲಿ ಬಿಟಿಎಂ ಲೇಔಟ್ ನಲ್ಲಿರುವ ಲಾಡ್ಜ್ ರೂಮಿಗೆ ಕರೆಸಿಕೊಂಡು ಬಾಲಕಿಗೆ ಮದ್ಯದಲ್ಲಿ ಅಮಲು ಔಷಧಿ ಬೆರೆಸಿ ಕುಡಿಸಿ ಆಕೆ ಮೇಲೆ ಆತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಇಬ್ಬರ ವಿರುದ್ಧ ಪೋಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣ ವರ್ಗಾಯಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿರುವುದಾಗಿ ಬೊಮ್ಮನಹಳ್ಳಿ ಪೊಲೀಸರು ತಿಳಿಸಿದ್ದಾರೆ.
In a shocking incident in Bangalore, a police constable has been accused of raping a victim who had approached him for assistance after experiencing sexual assault. The victim, who had come to the Bommanahalli police station to file her complaint, reported that the constable deceived her into believing he would help her. Instead, he allegedly took her to a nearby lodge, where he assaulted her.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm