ಬ್ರೇಕಿಂಗ್ ನ್ಯೂಸ್
24-02-25 07:08 pm Bangalore Correspondent ಕ್ರೈಂ
ಬೆಂಗಳೂರು, ಫೆ.24 : ದೂರು ನೀಡಲು ಠಾಣೆಗೆ ಬಂದಿದ್ದ ಅಪ್ರಾಪ್ತ ಆತ್ಯಾಚಾರ ಸಂತ್ರಸ್ತೆಯನ್ನು ಸಹಾಯ ಮಾಡುವ ನೆಪದಲ್ಲಿ ಪುಸಲಾಯಿಸಿ ಪೊಲೀಸ್ ಪೇದೆಯೇ ಮತ್ತೆ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧಿಸಿ ಪೊಲೀಸ್ ಕಾನ್ಸ್ಟೇಬಲ್ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪ್ರಾಪ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನ ವಿರುದ್ಧ ಮೈಕೋ ಲೇಔಟ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. 17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿದ್ದಳು. ಈ ವೇಳೆ ನೆರೆಮನೆ ನಿವಾಸಿ, ವಿವಾಹಿತ ವ್ಯಕ್ತಿಯೊಬ್ಬ ಪರಿಚಯವಾಗಿದ್ದು ಪ್ರೀತಿಯ ನಾಟಕವಾಡಿದ್ದ. ಪ್ರೀತಿಸಿ ಮದುವೆ ಮಾಡಿಕೊಳ್ಳೋದಾಗಿ ನಂಬಿಸಿ, ಬಾಲಕಿ ಮೇಲೆ ನಿರಂತರ ಆತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ನೊಂದ ಅಪ್ರಾಪ್ತ ಬಾಲಕಿ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು.
ಈ ಬಗ್ಗೆ ದೂರು ನೀಡಲು ಹೋಗಿದ್ದ ಸಂತ್ರಸ್ತೆಯನ್ನು ಅದೇ ಠಾಣೆಯ ಕಾನ್ಸ್ಟೇಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯ ಕೊಡಿಸುವುದಾಗಿ ಹೇಳಿ ನಂಬಿಕೆ ಹುಟ್ಟಿಸಿದ್ದ. ಅಲ್ಲದೆ, ಕೆಲಸ ಕೊಡಿಸುವುದಾಗಿ ನಂಬಿಸಿ ಕಳೆದ ಡಿಸೆಂಬರ್ ನಲ್ಲಿ ಬಿಟಿಎಂ ಲೇಔಟ್ ನಲ್ಲಿರುವ ಲಾಡ್ಜ್ ರೂಮಿಗೆ ಕರೆಸಿಕೊಂಡು ಬಾಲಕಿಗೆ ಮದ್ಯದಲ್ಲಿ ಅಮಲು ಔಷಧಿ ಬೆರೆಸಿ ಕುಡಿಸಿ ಆಕೆ ಮೇಲೆ ಆತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ತನ್ನ ಬಳಿ ಖಾಸಗಿ ವಿಡಿಯೋಗಳಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತೆ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಇಬ್ಬರ ವಿರುದ್ಧ ಪೋಕ್ಸೊ ಹಾಗೂ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣ ವರ್ಗಾಯಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿರುವುದಾಗಿ ಬೊಮ್ಮನಹಳ್ಳಿ ಪೊಲೀಸರು ತಿಳಿಸಿದ್ದಾರೆ.
In a shocking incident in Bangalore, a police constable has been accused of raping a victim who had approached him for assistance after experiencing sexual assault. The victim, who had come to the Bommanahalli police station to file her complaint, reported that the constable deceived her into believing he would help her. Instead, he allegedly took her to a nearby lodge, where he assaulted her.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm