ಬ್ರೇಕಿಂಗ್ ನ್ಯೂಸ್
17-12-20 01:59 pm Bangalore Correspondent ಕ್ರೈಂ
ಬೆಂಗಳೂರು, ಡಿ.17: ಆರೆಸ್ಸೆಸ್ ನಾಯಕನ ಸೋಗಿನಲ್ಲಿ ಒಬ್ಬಾತ ರಾಜ್ಯ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ಹೇಳ್ಕೊಂಡು ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಯುವರಾಜ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬವರಿಗೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ, ಒಂದು ಕೋಟಿ ರೂಪಾಯಿ ಪಡೆದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಆತನ ಮನೆಗೆ ದಾಳಿ ನಡೆಸಿದಾಗ, 91 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ.
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಾಗೂ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಈತ ಹತ್ತಾರು ಮಂದಿಗೆ ಮೋಸ ಮಾಡಿದ್ದಾನೆ. ಅಷ್ಟೇ ಅಲ್ಲ, ಅದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡಿದ್ದಾನೆ. ಯುವರಾಜನ ಬಂಧನ ಆಗುತ್ತಿದ್ದಂತೆ ಪೊಲೀಸರಿಗೆ ಹಲವು ಕಡೆಗಳಿಂದ ಮೋಸ ಹೋಗಿರುವ ಮಂದಿ ದೂರು ಹೇಳಿಕೊಂಡಿದ್ದಾರೆ. ಎಲ್ಲರೂ ಬಂದು ದೂರು ದಾಖಲು ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳೇ ಹೀಗೆ ಮೋಸ ಹೋದವರು ಎನ್ನುವುದು ವಿಶೇಷ.
ರಾಜ್ಯಪಾಲರ ಹುದ್ದೆ, ನಿಗಮ ಮಂಡಳಿ ಹುದ್ದೆಗೆ ಇಂತಿಷ್ಟು ಅಂತ ಲೆಕ್ಕ ಹೇಳಿಕೊಂಡಿದ್ದ ಯುವರಾಜ, ಅದಕ್ಕಾಗಿ ಇಂತಿಷ್ಟು ಅಡ್ವಾನ್ಸ್ ಹಣ ಪಡೆಯುತ್ತಿದ್ದ. ರಾಜಧಾನಿಯಲ್ಲಿ ಹಲವಾರು ಮಂದಿಗೆ ಹಣ ಪಡೆದು ಮೋಸ ಮಾಡಿದ್ದಾನೆ. ರಾಜ್ಯಪಾಲರನ್ನಾಗಿ ಮಾಡುತ್ತೇನೆಂದು ವ್ಯಕ್ತಿಯೊಬ್ಬರಿಂದ ಹತ್ತು ಕೋಟಿ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಹೀಗೂ ಮೋಸ ಹೋಗುತ್ತಾರೆಯೇ ಎಂದು ಪೊಲೀಸರೇ ಹುಬ್ಬೇರಿಸಿದ್ದಾರೆ.
ಇನ್ನೂ ಹಲವರು ಈತನಿಂದ ಮೋಸ ಹೋಗಿರುವ ಸಾಧ್ಯತೆಯಿದ್ದು ನಗದು ಹಣ ಕೊಟ್ಟಿರುವುದು ಮತ್ತು ಮರ್ಯಾದೆಗೆ ಅಂಜಿ ದೂರು ಕೊಡಲು ಮುಂದೆ ಬರುತ್ತಿಲ್ಲ. ಬಿಜೆಪಿ ಸರಕಾರದಲ್ಲಿ ಆರೆಸ್ಸೆಸ್ ನಾಯಕರು ಕೈಯಾಡಿಸಿದ್ರೆ ಎಲ್ಲವೂ ಆಗುತ್ತೆ ಅನ್ನುವ ಭರವಸೆಯಿಂದ ಸಾಕಷ್ಟು ಹಣವಂತರೇ ಮೋಸಕ್ಕೆ ಒಳಗಾಗಿದ್ದಾರೆ, ಶ್ರೀಮಂತರು ತನ್ನನ್ನು ನಂಬುವಂತೆ ಮಾಡಲು ತಾನು ಸಿಎಂ ಯಡಿಯೂರಪ್ಪರಿಗೆ ಆಪ್ತ ಎನ್ನುವಂತೆ ಬಿಂಬಿಸಿ ಸಿಎಂ ಜೊತೆಗಿರುವ ಫೋಟೋ ತೋರಿಸಿಕೊಂಡು ಯಾಮಾರಿಸುತ್ತಿದ್ದ.
Fraud in the name of Giving Governor post one person has arrested by CCB police in Bangalore. The arrested has been identified as Yuvarj.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm