ಬ್ರೇಕಿಂಗ್ ನ್ಯೂಸ್
01-03-25 05:54 pm HK News Desk ಕ್ರೈಂ
ಬೆಂಗಳೂರು, ಮಾ.1: ಕೇವಲ ಮೂರೇ ವರ್ಷದಲ್ಲಿ ರಾಯಲ್ ಎನ್ಫೀಲ್ಡ್ ಸೇರಿದಂತೆ 100ಕ್ಕೂ ಅಧಿಕ ದುಬಾರಿ ಬೈಕ್ ಗಳನ್ನು ಕದ್ದು ಮಾರಾಟ ಮಾಡಿದ್ದ ಆಂಧ್ರಪ್ರದೇಶ ಮೂಲದ ಕತರ್ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿ ಪ್ರಸಾದಬಾಬು ಎಂಬಾತನನ್ನು ಬೆಂಗಳೂರಿನ ಕೆಆರ್ ಪುರ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬೈಕ್ ಗಳ ಕಳ್ಳತನವನ್ನೇ ತನ್ನ ವೃತ್ತಿಯಾಗಿಸಿಕೊಂಡಿದ್ದ ಈತ ದುಬಾರಿ ಬೈಕ್ಗಳನ್ನೇ ಟಾರ್ಗೆಟ್ ಮಾಡ್ತಿದ್ದ. ಲಕ್ಷಾಂತರ ಮೌಲ್ಯದ ಬೈಕ್ಗಳನ್ನು ಕೇವಲ 15 ರಿಂದ 20 ಸಾವಿರ ರೂಪಾಯಿಗೆ ಮಾರಾಟ ಮಾಡಿ ದುಡ್ಡು ಮಾಡಿಕೊಳ್ಳುತ್ತಿದ್ದ. ಕೇವಲ ಮೂರು ವರ್ಷಗಳಲ್ಲಿ ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕದ್ದಿದ್ದು ಸೆಂಚುರಿ ಬಾರಿಸಿದ್ದಾನೆ.
ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಚಿಟಕಿ ಹೊಡೆಯುವುದರಲ್ಲಿ ಕಳ್ಳತನ ಮಾಡುತ್ತಿದ್ದ. ಬಳಿಕ ಕಡಿಮೆ ಹಣಕ್ಕೆ ಮಾರಿಕೊಂಡು ಅದೇ ಹಣದಲ್ಲಿ ಮೋಜು ಮಾಡುತ್ತಿದ್ದ. ಬೆಂಗಳೂರು, ಚಿತ್ತೂರು, ತಿರುಪತಿ ಸೇರಿ ಹಲವು ಕಡೆ ಈತ ತನ್ನ ಕೈಚಳಕ ತೋರಿಸಿದ್ದಾನೆ. 100ಕ್ಕೂ ಅಧಿಕ ಬೈಕ್ ಗಳನ್ನು ಕದ್ದು ಅವುಗಳನ್ನು ಆಂಧ್ರ ಪ್ರದೇಶದ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದ.
ಬಸ್ಸಿನಲ್ಲಿ ಬಂದು ಬೈಕ್ ನಲ್ಲಿ ಆಂಧ್ರ ಪ್ರದೇಶಕ್ಕೆ ಪರಾರಿ!
ಸಾಧಾರಣವಾಗಿ ಸಂಜೆ ಹೊತ್ತಿಗೆ ಆಂಧ್ರಪ್ರದೇಶದಿಂದ ಬಸ್ನಲ್ಲಿ ಬೆಂಗಳೂರಿಗೆ ಬರುತ್ತಿದ್ದ. ನಂತರ ಕೆ.ಆರ್.ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಿದ್ದ. ಮನೆ ಮುಂದೆ ನಿಂತಿರುವ ದುಬಾರಿ ಬೈಕ್ಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ. ಹೆಡ್ ಲೈಟ್ ತೆಗೆದು ಲಾಕ್ ಆಗಿದ್ದ ವೈರನ್ನು ಜೋಡಿಸಿ ಸ್ಟಾರ್ಟ್ ಮಾಡುತ್ತಿದ್ದ. ಬಳಿಕ ಅದೇ ಬೈಕ್ನಲ್ಲಿ ರಾತ್ರಿಯೇ ವಾಪಸ್ ಊರಿಗೆ ಎಸ್ಕೇಪ್ ಆಗುತ್ತಿದ್ದ. ಒಟ್ಟು 20 ರಾಯಲ್ ಎನ್ಫೀಲ್ಡ್, 30 ಪಲ್ಸರ್ ಬೈಕ್, 40 ಆ್ಯಕ್ಟಿವಾ ಸ್ಕೂಟರ್ ಗಳನ್ನು ಸೇರಿ ಹಲವು ದುಬಾರಿ ಬೈಕ್ಗಳನ್ನು ಕದ್ದಿದ್ದಾನೆ. ಸದ್ಯಕ್ಕೆ 1.45 ಕೋಟಿ ರೂ. ಮೌಲ್ಯದ 100 ಬೈಕ್ ವಶಕ್ಕೆ ಪಡೆದುಕೊಂಡಿದ್ದು ಕೆ.ಆರ್ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a significant breakthrough for local law enforcement, the KR Puram Police have arrested a notorious interstate bike lifter and recovered an astonishing 100 stolen two-wheelers valued at ₹1.4 crore. The accused, identified as Prasad Babu from Chittoor in Andhra Pradesh, has been linked to over 150 bike theft cases across multiple states, including Andhra Pradesh, Telangana, Karnataka, and Tamil Nadu.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm