ಬ್ರೇಕಿಂಗ್ ನ್ಯೂಸ್
07-03-25 05:51 pm HK News Desk ಕ್ರೈಂ
ಕಾಸರಗೋಡು, ಮಾ.7 : ಕಾಞಂಗಾಡು ಬಳಿಯ ಮಾವುಂಗಾಲ್ ಎಂಬಲ್ಲಿ ಕ್ರಶರ್ ಮ್ಯಾನೇಜರ್ ಗೆ ಬಂದೂಕು ತೋರಿಸಿ ಬೆದರಿಸಿ 10.20 ಲಕ್ಷ ರೂ. ನಗದನ್ನು ದರೋಡೆಗೈದ ಘಟನೆ ನಡೆದಿದ್ದು, ಕೃತ್ಯದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಕೆಲವೇ ಗಂಟೆಗಳ ಅಂತರದಲ್ಲಿ ಕಾಸರಗೋಡು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಿಹಾರ ಮೂಲದ ಮಹಮ್ಮದ್ ಇಬ್ರಾನ್ ಆಲಂ (21), ಮಹಮ್ಮದ್ ಮಲಿಕ್ (21), ಮಹಮ್ಮದ್ ಫಾರೂಕ್ (30) ಮತ್ತು ಅಸ್ಸಾಂ ಮೂಲದ ಧನಂಜಯ್ ಬೋರಾ (22) ಬಂಧಿತರಾಗಿದ್ದು, ದರೋಡೆಗೈದ ನಗದು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾಸರಗೋಡು ಎಸ್ಪಿ ಡಿ. ಶಿಲ್ಪಾ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬುಧವಾರ ಸಂಜೆ ಕಾಞಂಗಾಡು ಕಲ್ಯಾಣ್ ರಸ್ತೆಯ ಜಾಸ್ ಗ್ರಾನೈಟ್ ಅಗ್ರಿಗೇಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸ್ಟಾಕ್ ಯಾರ್ಡ್ ಮ್ಯಾನೇಜರ್ ಪಿಪಿ ರವೀಂದ್ರನ್ ಎಂಬವರಿಗೆ ಬಂದೂಕು ತೋರಿಸಿ ಅವರ ಕೈಯಲ್ಲಿದ್ದ ನಗದು ಹಣವನ್ನು ದರೋಡೆ ಮಾಡಲಾಗಿತ್ತು. ಸಂಜೆಯಾಗುತ್ತಲೇ ಕ್ರಶರ್ ಕಡೆಯಿಂದ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಇದರ ಬಗ್ಗೆ ತಿಳಿದಿದ್ದ ತಂಡವೊಂದು ಕಾರನ್ನು ಅಡ್ಡಗಟ್ಟಿ ಹಣವಿದ್ದ ಚೀಲವನ್ನು ಎಗರಿಸಿ ಪರಾರಿಯಾಗಿತ್ತು. 10.20 ಲಕ್ಷ ರೂ. ನಗದು ಹಾಗೂ ರವೀಂದ್ರನ್ ಕೈಯಲ್ಲಿದ್ದ ಮೊಬೈಲನ್ನು ಲೂಟಿ ಮಾಡಲಾಗಿತ್ತು. ಈ ಬಗ್ಗೆ ಕೂಡಲೇ ರವೀಂದ್ರನ್ ಅವರು ಕಂಪನಿ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ಹೊಸದುರ್ಗ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಎಲ್ಲ ಕಡೆಗೂ ಪೊಲೀಸರಿಗೆ ಅಲರ್ಟ್ ಮಾಹಿತಿ ನೀಡಲಾಗಿತ್ತು.
ಆರೋಪಿಗಳು ಪ್ರಯಾಣಿಸಿದ್ದ ಕಾರು ತೆಲಂಗಾಣ ನೋಂದಣಿ ಹೊಂದಿರುವುದು ಮತ್ತು ಆ ವಾಹನವನ್ನು ಕೋಜಿಕ್ಕೋಡ್ ಮೂಲದವರಿಗೆ ಬಾಡಿಗೆ ನೀಡಲಾಗಿತ್ತು ಎನ್ನುವುದು ತಿಳಿದುಬಂದಿತ್ತು. ಜಿಪಿಎಸ್ ಮೂಲಕ ಅದರ ಮಾಲೀಕರು ಸರ್ಚ್ ಮಾಡಿದಾಗ, ವಾಹನ ಕಾಞಂಗಾಡ್ ರೈಲು ನಿಲ್ದಾಣದ ಬಳಿ ನಿಂತಿತ್ತು. ಕೂಡಲೇ ಪೊಲೀಸರು ಅಲ್ಲಿ ತಲುಪುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಅಲ್ಲಿನ ಸಿಸಿಟಿವಿಯಲ್ಲಿ ಆರೋಪಿಗಳು ಮಂಗಳೂರಿನತ್ತ ತೆರಳಿದ ರೈಲಿನಲ್ಲಿ ಹೋಗಿರುವುದು ಪತ್ತೆಯಾಗಿತ್ತು. ಕಾಸರಗೋಡು ಎಸ್ಪಿ ಶಿಲ್ಪಾ ಅವರ ಸೂಚನೆಯಂತೆ ಮಂಗಳೂರಿನ ಪೊಲೀಸರು ರೈಲು ನಿಲ್ದಾಣದಲ್ಲಿ ಶಂಕಿತ ಮೂವರನ್ನು ವಶಕ್ಕೆ ಪಡೆದಿದ್ದರು.
ಆನಂತರ, ಬುಧವಾರ ರಾತ್ರಿಯೇ ಹೊಸದುರ್ಗ ಪೊಲೀಸರು ಮಂಗಳೂರಿಗೆ ಬಂದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕನೇ ಆರೋಪಿ ಅಸ್ಸಾಂ ಮೂಲದ ಧನಂಜಯ್ ಬೋರಾನನ್ನು ಆನಂತರ ಮಂಗಳೂರಿನಲ್ಲಿಯೇ ಬಂಧಿಸಲಾಗಿದೆ. ದೂರು ಬಂದ ಕೂಡಲೇ ಪೊಲೀಸರು ಎಲ್ಲ ಕಡೆ ಅಲರ್ಟ್ ಆಗಿದ್ದಲ್ಲದೆ, ಕಾರನ್ನು ಟ್ರೇಸ್ ಮಾಡಿ ಬೆನ್ನತ್ತಿದ್ದರಿಂದ ಆರೋಪಿಗಳನ್ನು ಸುಲಭದಲ್ಲಿ ಬಲೆಗೆ ಕೆಡವಲು ಸಾಧ್ಯವಾಗಿದೆ. ಕಾಞಂಗಾಡು ಡಿವೈಎಸ್ಪಿ ಬಾಬು ಪೆರಿಂಜೋತ್, ಹೊಸದುರ್ಗ ಇನ್ಸ್ ಪೆಕ್ಟರ್ ಪಿ.ಅಜಿತ್ ಕುಮಾರ್, ಎಸ್ಐಗಳಾದ ಅಖಿಲ್, ಜೋಜೊ ಮತ್ತು ಅಪರಾಧ ವಿಭಾಗದ ಪೊಲೀಸರಾದ ಶೈಜು ಮೋಹನ್, ಸನೋಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
The police have arrested four individuals in connection with the alleged armed robbery of ₹10.20 lakh from a crusher manager at Mavungala, Kanhangad, Kasaragod, on Thursday (March 6). The arrested suspects are Bihar natives Muhammed Ebron Alam, 21, Muhammed Malik, 21, and Muhammad Farooq, 30, and Assam native Dhananjan Bora, 22.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am