ಬ್ರೇಕಿಂಗ್ ನ್ಯೂಸ್
08-03-25 10:44 pm HK News Desk ಕ್ರೈಂ
ಕೊಪ್ಪಳ, ಮಾ.8 : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯ ವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯೊಬ್ಬರ ಮೇಲೆ ಮೂರು ಜನರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅಲ್ಲದೆ ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂವರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ.

ಈ ಮಧ್ಯೆ, ಇಬ್ಬರು ಮಹಿಳಾ ಸಂತ್ರಸ್ತರು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಗಂಗಾವತಿ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಬಂಧಿತರು. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಪೆಟ್ರೋಲ್ ಗೆ ಹಣ ಕೊಡಲಿಲ್ಲವೆಂದು ಅತ್ಯಾಚಾರ
ದುಷ್ಕರ್ಮಿಗಳು ಮದ್ಯ ಸೇವಿಸಿದ ನಂತರ ತಮ್ಮ ದ್ವಿಚಕ್ರ ವಾಹನದಲ್ಲಿ ಸುತ್ತುವ ಅಭ್ಯಾಸವನ್ನು ಹೊಂದಿದ್ದರು. ಇದೇ ರೀತಿ ಗುರುವಾರ ಸವಾರಿಯಲ್ಲಿದ್ದಾಗ ಪ್ರವಾಸಿಗರ ಗುಂಪನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೊದಲು ಅವರು ಪೆಟ್ರೋಲ್ ಬಂಕ್ ಕುರಿತು ವಿಚಾರಿಸಿದ್ದು, ಈ ವೇಳೆ ಪೆಟ್ರೋಲ್ ಗೆ ಹಣ ನೀಡು ಎಂದು ಕೇಳಿದ್ದಾರೆ. ಪ್ರವಾಸಿಗರು ಹಣ ನೀಡಲಿಲ್ಲ ಎಂದು ಜಗಳ ತೆಗೆದಿದ್ದಾರೆ. ಬಳಿಕ ಅಲ್ಲಿದ್ದ ಪುರುಷರನ್ನು ಹೊಡೆದು ಅವರನ್ನು ನಾಲೆಗೆ ತಳ್ಳಿದ್ದಾರೆ. ನಂತರ ಇಸ್ರೇಲಿ ಮೂಲದ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲೆಗೆ ಬಿದ್ದ ಮೂವರು ಪುರುಷರ ಪೈಕಿ ಇಬ್ಬರು ಈಜಿ ಜೀವ ಉಳಿಸಿಕೊಂಡಿದ್ದರೆ, ಓರ್ವ ಒಡಿಶಾ ಮೂಲದ ಪ್ರವಾಸಿಗರು ಈಜಲು ಬಾರದೇ ಸಾವನ್ನಪ್ಪಿದ್ದಾನೆ.
Koppal police arrested two men on Saturday in connection with the gang-rape of a 27-year-old Israeli tourist and a 29-year-old homestay operator near Sanapur Lake, close to the Unesco World Heritage Site of Hampi.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm