ಬ್ರೇಕಿಂಗ್ ನ್ಯೂಸ್
16-03-25 10:39 pm Bangalore Correspondent ಕ್ರೈಂ
ಬೆಂಗಳೂರು, ಮಾ.16 : ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಖಾಸಗಿ ಬ್ಯಾಂಕ್ ಒಂದರ ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡೆಪ್ಯೂಟಿ ಮ್ಯಾನೇಜರ್ ಮೇಘನಾ, ಅವರ ಪತಿ ಶಿವಪ್ರಸಾದ್, ಸ್ನೇಹಿತರಾದ ವರದರಾಜು ಮತ್ತು ಅನ್ವರ್ ಘೋಷ್ ಬಂಧಿತರು.
ಬೆಂಗಳೂರಿನ ಗಿರಿನಗರದ ಖಾಸಗಿ ಬ್ಯಾಂಕ್ವೊಂದರಲ್ಲಿ ವೃದ್ಧ ದಂಪತಿ ಜಾಯಿಂಟ್ ಅಕೌಂಟ್ ತೆರೆದಿದ್ದರು. ಅದೇ ಬ್ಯಾಂಕ್ನಲ್ಲಿ ಎಫ್ಡಿ ಖಾತೆಯನ್ನೂ ಸಹ ಹೊಂದಿದ್ದರು. ಇದೇ ವೇಳೆ, ವೃದ್ಧೆಗೆ ಬ್ಯಾಂಕ್ನ ಡೆಪ್ಯೂಟಿ ಮ್ಯಾನೇಜರ್ ಆಗಿರುವ ಮೇಘನಾ ಪರಿಚಯವಾಗಿತ್ತು. ಬ್ಯಾಂಕ್ ವ್ಯವಹಾರದಲ್ಲಿ ಸಹಾಯ ಮಾಡುತ್ತಿದ್ದ ಮೇಘನಾ ಜೊತೆ ಕುಟುಂಬದ ಕಷ್ಟ ಸುಖಗಳನ್ನು ವೃದ್ಧೆ ಹಂಚಿಕೊಳ್ಳುತ್ತಿದ್ದರು.
ದಂಪತಿ ಚಾಮರಾಜಪೇಟೆಯಲ್ಲಿದ್ದ ಮನೆ ಮಾರಾಟ ಮಾಡಿರುವ ವಿಚಾರವನ್ನೂ ವೃದ್ಧೆ ಮೇಘನಾಗೆ ಹೇಳಿದ್ದರು. ಮನೆ ಮಾರಾಟದಿಂದ ವೃದ್ಧ ದಂಪತಿಯ ಬ್ಯಾಂಕ್ ಖಾತೆಗೆ ಒಂದು ಕೋಟಿ ಹಣ ಜಮೆಯಾಗಿತ್ತು. ಆ ಹಣದ ಮೇಲೆ ಕಣ್ಣಿಟ್ಟಿದ್ದ ಮ್ಯಾನೇಜರ್ ಮೇಘನಾ, ವೃದ್ಧೆ ಬ್ಯಾಂಕ್ಗೆ ಹೋದಾಗ ನಿಮ್ಮ ಎರಡು ಬಾಂಡ್ ಅವಧಿ ಮುಗಿದಿದೆ. ಹೊಸ ಬಾಂಡ್ ಖರೀದಿಗೆ ದಾಖಲಾತಿ ಮತ್ತು ಚೆಕ್ ಅವಶ್ಯಕತೆ ಇದೆ ಎಂದು ಹೇಳಿದ್ದಾಳೆ. ಬಳಿಕ ಮೇಘನಾ ವೃದ್ಧೆಯ ಮನೆಗೆ ತೆರಳಿ ಎರಡು ಖಾಲಿ ಚೆಕ್ ಮೇಲೆ ಸಹಿ ಮಾಡಿಸಿಕೊಂಡು, ಜೊತೆಗೆ ಒಂದಿಷ್ಟು ಕಾಗದ ಪತ್ರಗಳಿಗೂ ಸಹಿ ಪಡೆದಿದ್ದಳು.
ಅದೇ ಸಂದರ್ಭದಲ್ಲಿ ಆರ್ಟಿಜಿಎಸ್ ಪತ್ರಕ್ಕೂ ಸಹಿ ಪಡೆದಿದ್ದ ಮೇಘನಾ, 50 ಲಕ್ಷ ರೂ. ಹಣವನ್ನ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ. ವೃದ್ಧ ದಂಪತಿಯ ಮಗ ಮೊಬೈಲ್ನಲ್ಲಿ ಅಕೌಂಟ್ ಬ್ಯಾಲೆನ್ಸ್ ನೋಡುವಾಗ ಹಣ ಕಡಿಮೆ ಇರುವುದು ಪತ್ತೆಯಾಗಿದೆ. ಬಳಿಕ, ಬ್ಯಾಂಕ್ನಿಂದ ಬಂದಿದ್ದ ಮೆಸೇಜ್ಗಳನ್ನು ಪರಿಶೀಲಿಸಿದ್ದಾರೆ. ಫೆಬ್ರವರಿ 13ರಂದು ಬೇರೆ ಖಾತೆಗೆ ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ನಂತರ ವೃದ್ಧೆ ಬ್ಯಾಂಕ್ಗೆ ಹೋಗಿ ಮೇಘಾಳನ್ನು ಪ್ರಶ್ನಿಸಿದಾಗ, 'ನೀವು ಹೇಳಿದ ಖಾತೆಗೆ ಆರ್ಟಿಜಿಎಸ್ ಮಾಡಲಾಗಿದೆ' ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾಳೆ.
ಬಳಿಕ ವೃದ್ಧೆ ಗಿರಿನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಮ್ಯಾನೇಜರ್ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
The Girinagar police have made significant strides in combating financial fraud with the arrest of four individuals, including a deputy manager of a prominent private bank, in connection with the swindling of an elderly woman out of Rs 50 lakh. The accused, identified as Meghana, the deputy manager, along with her husband Shivaprasad and their acquaintances Varadaraju and Anwar Ghosh, were apprehended following an investigation launched after the victim reported the fraudulent activities.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm