ಬ್ರೇಕಿಂಗ್ ನ್ಯೂಸ್
17-03-25 07:51 pm Mangalore Correspondent ಕ್ರೈಂ
ಮಂಗಳೂರು, ಮಾ.17: ಮಂಗಳೂರು, ಪುತ್ತೂರು, ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ಎದುರಿಸುತ್ತಿದ್ದ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ(32) ಬಂಧಿತ ವ್ಯಕ್ತಿ. ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ಅಸೀರ್ ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಅಸೀರ್ ವಿದೇಶದಲ್ಲಿ ತಲೆಮರೆಸಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ವಾರಂಟ್ ಜಾರಿಯಲ್ಲಿರುತ್ತದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಎಎಸ್ಐಗಳಾದ ಮೋಹನ್ ಕೆ.ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Mangalore Underworld Associate of Gangster Kali Yogesh Arrested after Nine Years on the Run, Police Seize Drugs. The arrested has been identified as Mohammed Asheer Maya.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm