ಬ್ರೇಕಿಂಗ್ ನ್ಯೂಸ್
18-03-25 06:31 pm Mangalore Correspondent ಕ್ರೈಂ
ಮಂಗಳೂರು, ಮಾ.18 : ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪ್ರಕರಣದಲ್ಲಿ ದೆಹಲಿಯ ನಾರ್ಕೋಟಿಕ್ ಕ್ರೈಮ್ ಬ್ಯೂರೋ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಬಂಧನ ಆಗಿರುವುದರಿಂದ ಅಲ್ಲಿಂದಲೇ ತನಿಖೆ ಎತ್ತಿಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಾದ ದಕ್ಷಿಣ ಆಫ್ರಿಕಾ ಮೂಲದ ಬಾಂಬಾ ಫಾಂಟಾ ಹಾಗು ಅಜಿಗೈಲ್ ಅಡೋನಿಸ್ ಅವರನ್ನು ಮಂಗಳೂರು ಪೊಲೀಸರು 7 ದಿನಗಳ ಕಾಲ ಕಸ್ಟಡಿ ಪಡೆದಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿರುವುದು ಪತ್ತೆಯಾಗಿದ್ದರಿಂದ ರಾಜಧಾನಿ ಆಸುಪಾಸಿನಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ತಯಾರಿ ಆಗುತ್ತಿರುವ ಅನುಮಾನಗಳಿವೆ. ದೆಹಲಿಯ ಕೈಗಾರಿಕಾ ಏರಿಯಾದಲ್ಲೇ ಡ್ರಗ್ಸ್ ತಯಾರಿ ನಡೆಸುತ್ತಿರುವ ಮಾಹಿತಿಯಿದ್ದು ಮಂಗಳೂರು ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.
ದೆಹಲಿ ಕೇಂದ್ರೀಕರಿಸಿ ದೇಶದ ಹಲವಾರು ಭಾಗಗಳಲ್ಲಿ ಡ್ರಗ್ಸ್ ಸಾಮ್ರಾಜ್ಯ ಹರಡಿಕೊಂಡಿದ್ದು ದೇಸೀ ವಿಮಾನದಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಡ್ರಗ್ಸ್ ರವಾನೆ ಆಗುತ್ತಿರುವ ವಿಚಾರ ತನಿಖೆಯಲ್ಲಿ ಬಯಲಾಗಿದ್ದು ಆತಂಕ ಮೂಡಿಸಿದೆ. ಆರೋಪಿಗಳ ಮಾಹಿತಿ ಆಧರಿಸಿ ಮಂಗಳೂರು ಪೊಲೀಸರು ದೆಹಲಿಗೂ ತನಿಖೆ ವಿಸ್ತರಿಸಿದ್ದಾರೆ. ಬಂಧಿತ ಮಹಿಳೆಯರು ಡ್ರಗ್ಸ್ ಕ್ಯಾರಿಯರ್ ಆಗಿ ಕೆಲಸ ಮಾಡುತ್ತಿದ್ದು ಪ್ರಮುಖ ನಗರಗಳಿಗೆ ಖುದ್ದಾಗಿ ತೆರಳಿ ಪೂರೈಕೆ ಮಾಡುತ್ತಿದ್ದರು.
ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು ಬಯಲಿಗೆಳೆದಿರುವ ಡ್ರಗ್ಸ್ ಜಾಲದ NCB ಅಧಿಕಾರಿಗಳು ಮತ್ತಷ್ಟು ಆಳವಾಗಿ ತನಿಖೆ ನಡೆಸಲಿದ್ದು ಎಲ್ಲಿಂದ ಪೂರೈಕೆ ಆಗುತ್ತದೆ ಮತ್ತು ಇದರ ಹಿಂದೆ ಯಾರಿದ್ದಾರೆ ಎನ್ನುವ ವಿಚಾರದ ಬಗ್ಗೆ ತನಿಖೆ ನಡೆಸಲಿದ್ದಾರೆ.
Mangalore Massive Drug Bust, Delhi NCB Investigates Suspected Drug Factory in Bangalore. In a significant operation, law enforcement has uncovered a massive drug bust in Mangalore, raising concerns about the drug trade in the region. The Delhi Narcotics Control Bureau (NCB) has stepped in, launching an investigation into a suspected drug factory located in Bangalore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am